ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರೂ ಕಾರಣ, ಗೊತ್ತಿದ್ದರೂ ಅಮೇರಿಕಾಕ್ಕೆ ಹೋದರು; ಜಿಟಿಡಿ

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರೂ ಕಾರಣ‌. ಮೈತ್ರಿ ಸರ್ಕಾರ ಬೀಳುತ್ತೇ ಅಂತ ಗೊತ್ತಿತ್ತು.ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು ಎಂದು
ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಹೇಳಿದರು.

ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ನಡುವೆ ನಡೆದ ವಾಗ್ವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕರು ಪಕ್ಷ ಬಿಟ್ಟು ಹೋಗ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು. ಮನಸ್ಸು ಮಾಡಿದ್ದರೆ ಅದನ್ನು ಸಿದ್ದರಾಮಯ್ಯ ತಡೆಯಬಹುದಿತ್ತು. ಆದರೆ ತಡೆಯುವ ಪ್ರಯತ್ನ ಮಾಡಲಿಲ್ಲ.
ಆದ್ದರಿಂದ ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು‌ ಎಂದು ಆರೋಪಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರ್ಮಾಘಾತವೆಂದ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ. ಈ ಮೊದಲು ವರುಣ ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು ಎಂದರು.

ತಾಲ್ಲೂಕು ಬೋರ್ಡ್ ಮೆಂಬರ್ ನಿಂದ ಹಿಡಿದು ಡಿಸಿಎಂ ಆಗುವವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಇದ್ದರು. ವರುಣಾ ಕ್ಷೇತ್ರ ಉದಯವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೂ, ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಬಯಸಿದ್ದರು.ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ.
ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ಜಿ‌.ಟಿ.ದೇವೇಗೌಡ ಹೇಳಿದರು.


Spread the love

LEAVE A REPLY

Please enter your comment!
Please enter your name here