ಯಡಿಯೂರಪ್ಪ ಕುಟುಂಬಕ್ಕೆ ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ಹಣ ಹೋಗಿದೆ: ಸಿದ್ರಾಮಯ್ಯ ಆರೋಪ

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ಎಲ್ಲರಿಗೂ ಹಾಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ. ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡ್ತಾರೆ. ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲು ಮಾಡಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಮಾತನಾಡಿರುವ ಅವರು, ನಾವೇನೂ ಆರೋಪ ಮಾಡ್ತಿಲ್ಲ. ಅವರ ಪಕ್ಷದವರೇ ಆರೋಪ ಮಾಡಿರೋದು. ಅದರಲ್ಲಿ ಸತ್ಯ ಇದೆ ಅಲ್ವಾ. ನಾವ್ ಮಾಡಿದ್ರೆ ವಿರೋಧ ಪಕ್ಷದವರು ಅಂತಾರೆ. ಹಾಗಾಗಿ ಅವರು ಬ್ಲಾಕ್ ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ. ಅದಕ್ಕೆಲ್ಲಾ ತನಿಖೆ ಮಾಡಿ ಅಂತ ಹೇಳಲ್ಲ, ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳ್ತೀನಿ ಎಂದರು.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಬಗ್ಗೆ ಬಹಳ ಹಿಂದೆಯೇ ನಾನು ಹೇಳಿದ್ದೇನೆ. ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ಹಣ ಅವರ ಕುಟುಂಬದವರ ಖಾತೆಗೆ ಹೋಗಿದೆ. ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ ಎಂದು ಪ್ರಶ್ನಿಸಿದರು.

ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ, ಜನರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಉಂಟಾಗಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಾಯಕತ್ವ ಬದಲಾವಣೆಗೆ ಸಿದ್ದರಾಮಯ್ಯ ದಿನಾಂಕ ನಿಗದಿ ಮಾಡಲಿ ಎಂಬ ಬಿಎಸ್ವೈ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಇಷ್ಟು ದಿನಗಳ ಕಾಲ ಮಂತ್ರಿ ಮಂಡಲ ವಿಸ್ತರಣೆ ಯಾಕೆ ಮಾಡಿರಲಿಲ್ಲ. ಮಂತ್ರಿ ಮಂಡಲ ವಿಸ್ತರಣೆಗೆ ಯಾಕೆ ತಡವಾಯಿತು, ಗೋಗರೆದು ಕೈಕಾಲು ಕಟ್ಟಿ ಮಂತ್ರಿ ಮಂಡಲ ವಿಸ್ತರಣೆ ಮಾಡಿಸಿಕೊಂಡಿರೋದು ಎಂದು ವ್ಯಂಗ್ಯವಾಡಿದರು.

ಸಚಿವ ಸಂಪುಟದಿಂದ ಪಕ್ಷೇತರನಾಗಿ ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಗೆದ್ದಿದ್ದ ಶಾಸಕ ನಾಗೇಶ್ ರನ್ನ ಕೈಬಿಟ್ಟಿದ್ದಾರೆ. ಯಾವ ಕಾರಣಕ್ಕೆ ಬಿಟ್ಟಿದ್ದಾರೆ ಎಂದು ಕಾರಣ ಕೊಟ್ಟಿಲ್ಲ.
ಅವರೂ ಆಪರೇಷನ್ ಕಮಲಕ್ಕೆ ಒಳಪಟ್ಟವರು. ಈಗ ಮುನಿರತ್ನನನ್ನು ಕೈ ಬಿಟ್ಟಿದ್ದಾರೆ. ಕಾನೂನು ತೊಡಕಿದೆ ಎಂದು ಗೊತ್ತಿದ್ದರೂ ಯಾಕೆ ಕರೆದುಕೊಂಡರು. ಅವನನ್ನು ಮಿನಿಸ್ಟರ್ ಮಾಡಲು ಆಗಲಿಲ್ಲ ಎಂದ ಮೇಲೆ ಯಾಕೆ ತಗೆದುಕೊಂಡ್ರು.?
ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ ಎಂದು
ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.


Spread the love

LEAVE A REPLY

Please enter your comment!
Please enter your name here