ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್ ಅವರ ಮನೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Advertisement

ನಗರದ ಮುಳಗುಂದ ರಸ್ತೆಯಲ್ಲಿರುವ ರುದ್ರೇಶ್ ಅವರು ವಾಸವಾಗಿರುವ ಸರ್ಕಾರಿ ಕ್ವಾಟರ್ಸ್, ಜಿಲ್ಲಾಡಳಿತ ಭವನದಲ್ಲಿರುವ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಗ್ರಾಮದ ಮನೆ ಮೇಲೆಯೂ ಸಹ ದಾಳಿ ನಡೆಸಲಾಗಿದೆ.

ದಾಳಿ ವೇಳೆ 400 ಗ್ರಾಂ ಚಿನ್ನಾಭರಣ, ಒಂದೂವರೆ ಲಕ್ಷ ನಗದು ದೊರಕಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆಸಲಾಗಿದೆ.
ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.