ವಿಜಯಸಾಕ್ಷಿ ಸುದ್ದಿ, ಕಲಬುರಗಿ: ರಸ್ತೆಯಲ್ಲಿ ನಿಂತಿದ್ದ ಯುವಕರ ಮೇಲೆ ಗುಂಪೊಂದು ದಾಳಿ ನಡೆಸಿ, ಅವರ ಬಳಿಯಿದ್ದ ಮೊಬೈಲ್ ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಇಲ್ಲಿನ ಬಾಪು ನಗರದಲ್ಲಿ ನಡೆದಿದೆ.
ಗುಂಪಾಗಿ ಬಂದ ದುಷ್ಕರ್ಮಿಗಳು ಯುವಕರನ್ನು ಬೆದರಿಸಿ ಅವರ ಮೇಲೆ ಹಲ್ಲೆ ಮಾಡಿ ಮೊಬೈಲ್, ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಮಹ್ಮದ್ ಜಾಕೀರ್, ಮಜರ್ ಹಾಗೂ ಸತ್ತಾರ್ ಎನ್ನುವವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
![](http://vijayasakshi.com/wp-content/uploads/2021/01/img_20210121_81832034046691567675430.jpg)
ಗಾಯಗೊಂಡಿರುವ ಮೂವರೂ, ತಮ್ಮ ಬೈಕ್ ನಲ್ಲಿ ಪೆಟ್ರೋಲ್ ಮುಗಿದಿದ್ದರಿಂದ ಗೆಳೆಯರಿಗೆ ತರಲು ಹೇಳಿದ್ದು, ಗೆಳಯರ ಬರುವಿಕೆಗಾಗಿ ಕಾಯುತ್ತಿದ್ದ ವೇಳೆ ಹಲ್ಲೆ ನಡೆಸಲಾಗಿದೆ.
ಏಕಾಏಕಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮೊಬೈಲ್, ಹಣ ಕೊಡುವಂತೆ ಒತ್ತಾಯ ಮಾಡಿದ್ದಾರೆ. ತಮ್ಮ ಬಳಿ ಏನೂ ಇಲ್ಲ ಎಂದಾಗ ಹಲ್ಲೆ ಮಾಡಿ ಜೇಬಿನಲ್ಲಿದ್ದದ್ದನ್ನು ಕಿತ್ತುಕೊಂಡು ಪರಾರಿಯಾಗಿದ್ದಾಗಿ ಗಾಯಾಳುಗಳು ಹೇಳಿದ್ದಾರೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.