ರಸ್ತೆ ದುರಸ್ತಿಗೆ ಪ್ರಥಮಾದ್ಯತೆ ನೀಡಿ: ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸತತ ಮಳೆಯಿಂದಾಗಿ ಗದಗ-ಬೆಟಗೇರಿ ನಗರಸಭೆ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿದ್ದು ಸದ್ಯ ಮಳೆ ಕಡಿಮೆಯಾದ ಕಾರಣ ರಸ್ತೆಗಳ ಸುಧಾರಣೆಗೆ ಮೊದಲ ಆಧ್ಯತೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಜರುಗಿದ ಸಭೆಯಲ್ಲಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆಗಳು ಮಳೆಯಿಂದಾಗಿ ಹಾಳಾಗಿದ್ದು, ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು, ರಸ್ತೆ ಸುಧಾರಣೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳು ಕೂಡಲೇ ಕ್ರಮವಹಿಸುವುದು ಅವಶ್ಯವಿರುತ್ತದೆ.

ಈಗಾಗಲೇ ಹಲವಾರು ಬಾರಿ ಸಭೆಗಳಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕುರಿತು ನಿರ್ದೇಶನಗಳನ್ನು ನೀಡಲಾಗಿದ್ದು, ಕೆಲವು ಅತಿ ಜನಸಂದನಿ ಹಾಗೂ ವಾಹನ ಸಂಚಾರ ಇರುವ ರಸ್ತೆಗಳನ್ನು ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕ ಓಡಾಟಕ್ಕೆ ಕ್ರಮವಹಿಸಲಾಗಿತ್ತು, ಅತಿಯಾದ ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ಸುಧಾರಣೆಗೆ ಮಳೆ ಅವಕಾಶ ನೀಡದೇ ಇರುವ ಕಾರಣ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರಲಿಲ್ಲಾ.

ಆದರೆ ಕಳೆದ ಒಂದು ವಾರದಿಂದ ಮಳೆ ಪೂರ್ಣ ಪ್ರಮಾಣದಲ್ಲಿ ನಿಂತು ಹೋದ ಕಾರಣ ಕೂಡಲೇ ಲೋಕೋಪಯೋಗಿ ಇಲಾಖೆ ತಮ್ಮ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಗಳನ್ನು 15 ದಿನಗಳೊಳಾಗಿ ಕ್ರಮವಹಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲು ಸಭೆಯಲ್ಲಿ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಅದೇ ರೀತಿ ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚು ವಾಹನ ಸಂಚಾರದ ರಸ್ತೆಗಳನ್ನು ಗುರುತಿಸಿ ಮೊದಲ ಹಂತದಲ್ಲಿ ಕೂಡಲೇ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೊಳ್ಳಲು ಸೂಚಿಸಿದರು. ಹಾಗೂ ಇತರೇ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಭೆಯಲ್ಲಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಕೆ.ಯು.ಡಬ್ಲೂ.ಎಸ್. ವತಿಯಿಂದ ಒಳಚರಂಡಿ ಹಾಗೂ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ 24*7 ನೀರು ಸರಬರಾಜು ಅಭಿವೃದ್ಧಿ ಕಾಮಗಾರಿಗಳಿಂದ ಹಾಳಾದ ರಸ್ತೆಗಳನ್ನು ಪ್ರಥಮ ಆಧ್ಯತೆ ಮೇರೆಗೆ ದುರಸ್ತಿಗೊಳಿಸಲು ಸೂಚಿಸಿದರು. ಅದೇ ರೀತಿ ಗದಗ ಜಿಲ್ಲೆಗೆ ಸಂಬಂಧಿಸಿದ ನಗರದ ಹೊರವಲಯದಲ್ಲಿರುವ ಸಂಪರ್ಕ ರಸ್ತೆಗಳು ನಿರ್ವಹಣೆಯನ್ನು ರಾಜ್ಯ ಹೆದ್ದಾರಿ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ, ಕೆಶೀಪ್, ಹಾಗೂ ಲೋಕೋಪಯೋಗಿ ಇಲಾಖೆಗಳು ಹಾಳಾದ ರಸ್ತೆಗಳನ್ನು ಸುಧಾರಿಸಲು ಕೂಡಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ಸಭೆಯಲ್ಲಿ ಸೂಚಿಸಿದರು.

ಕುಡಿಯುವ ನೀರು ಸರಬರಾಜು ಹಾಗೂ ಒಳಚರಂಡಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಅಗತ್ಯ ನಿರ್ದೇಶನಗಳನ್ನು ನೀಡಿ ಮಳೆಯಿಂದ ಹಾಳಾದ ರಸ್ತೆಗಳಿಗೆ ದುರಸ್ತಿ ಕಾರ್ಯಗಳನ್ನು ಸಂಬಂಧಿಸಿದ ಇಲಾಖೆಗಳು ಕೂಡಲೇ ಕ್ರಮವಹಿಸುವಂತೆ ಸಭೆಯಲ್ಲಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ರುದ್ರೇಶ ಎಸ್.ಎನ್ ಹಾಗೂ ಲೋಕೋಪಯೋಗಿ ಇಲಾಖೆ, ಕೆ.ಯು.ಡಬ್ಲೂ.ಎಸ್ & ಡಿ.ಬಿ ಮತ್ತು ಕೆ.ಯು.ಐ.ಡಿ.ಎಫ್.ಸಿ ರಾಜ್ಯ ಹೆದ್ದಾರಿ ಪ್ರಾಧಿಕಾರ, ಅಧಿಕಾರಿಗಳು ಮತ್ತು ನಗರಸಭೆಯ ಅಭಿಯಂತರರು ಸಭೆಯಲ್ಲಿ ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here