ರಾಜಕೀಯ ಒತ್ತಡದಿಂದ ಸಿಎಂ ಕಾರ್ಯದರ್ಶಿ ಆತ್ನಹತ್ಯೆಗೆ ಯತ್ನಿಸಿದ್ರಾ?

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಅಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಶುಕ್ರವಾರ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದರು.ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿಗಷ್ಟೇ ಸಿಎಂ ಯಡಿಯೂರಪ್ಪ ರಾಜಕೀಯ ಸಲಹೆಗಾರರು ಮತ್ತು ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ ಪ್ರಕಾಶ ಅವರು ರಾಜೀನಾಮೆ ನೀಡಿದ್ದರು. ಅದರಂತೆ ಯಡಿಯೂರಪ್ಪ ಪರಮಾಪ್ತ ಪರಮಾಪ್ತ ಎಂ.ಬಿ.ಮರಮಕ್ಕಲ್ ರಾಜಕೀಯ ಹುದ್ದೆಯಿಂದ ವಜಾ ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತೋಷ ಆತ್ಮಹತ್ಯೆಗೆ ಯತ್ನಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸಂತೋಷ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದ ಜೀವನ ಸಾಕೆನಿಸಿದೆ ಎಂದ್ದು ನನ್ನೆದುರು ಹೇಳಿದ್ದರು. ಇದರಿಂದ ನಿದ್ದೆ ಬರಲಿಲ್ಲವೆಂದರೆ, ನಿದ್ದೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು ಎಂದು ಸಂತೋಷ ಪತ್ನಿ ಜಾಹ್ನವಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ‌.

ಆದರೆ, ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ರಾಜ್ಯ ರಾಜಕೀಯದ ಬೆಳವಣಿಗೆಗಳಾ? ಅಥವಾ ಸಿಎಂ ಕಚೇರಿಯಲ್ಲಾಗುತ್ತಿರುವ ಬೆಳವಣಿಗೆಗಳಿಂದಾ? ಎಂಬುದರ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ. ತುಮಕೂರು ಜಿಲ್ಲೆ ತಿಪಟೂರು ಹೊಣವಿನಕೆರೆ ಎನ್.ಆರ್.ಸಂತೊಷ ಅವರನ್ನು ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ದೊಂದಿಗೆ ಸಿಎಂ ಕಾರ್ಯದರ್ಶಿಯಾಗಿ ನೇಮಿಸಿದ್ದು, ಕೆಲವರ ಅಸಮಾಧಾನಕ್ಕೆ ಕಾರಣವಾಗಿತ್ತು.

ಇನ್ನೂ ವಿಧಾ‌ನಸೌಧದ ಪಡಸಾಲೆಯಲ್ಲಿ ಸಂತೋಷ ಅವರಿಗೆ ರಾಜೀನಾಮೆ ಕೊಡಿ ಎಂದು ಸೂಚಿಸಿದ್ದೆ ಆತ್ಮಹತ್ಯೆ ಯತ್ನಕ್ಕೆ ಕಾರಣವಿರಬಹುದು? ಎಂಬ ಗುಸುಗುಸು ಮಾತುಗಳು ಕೇಳಿ ಬರುತ್ತಿವೆ. ಆದರೆ, ಇದು ಎಷ್ಟರಮಟ್ಟಿಗೆ ಸತ್ಯ ಎಂಬುದು ತಿಳಿಯಬೇಕಿದೆ.

ಸದ್ಯ ಸದಾಶಿವನಗರ ಪೊಲೀಸರು ಸಂತೋಷ ಅವರ ವಿರುದ್ಧ ಆತ್ಮಹತ್ಯೆಗೆ ಯತ್ನ ಐಪಿಸಿ ಸೆಕ್ಷನ್ 309 ರ ಅಡಿ ಪ್ರಕರಣ ದಾಖಲಿಸಿಕೊಂಡು, ಜಾಹ್ನವಿ ಅವರ ಹೇಳಿಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here