ರಾಜಕೀಯ ದ್ವೇಷಕ್ಕೆ ಬಣವೆಗೆ ಬೆಂಕಿ; ಸುಟ್ಟು ಕರಕಲಾದ ಲಕ್ಷಾಂತರ ರೂ.ಮೌಲ್ಯದ ಶೇಂಗಾ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ರಾಜಕೀಯ ದ್ವೇಷಕ್ಕೆ ದುಷ್ಕರ್ಮಿಗಳು ಬಣವಿಗೆ ಬೆಂಕಿ ಇಟ್ಟಿರುವ ಕುಕೃತ್ಯ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಪರಸಾಪೂರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

ಹನಮಂತ ಬೆರಗಣ್ಣವರ್ ಎಂಬುವವರಿಗೆ ಸೇರಿದ ಶೇಂಗಾ ಬಣವಿ ಸುಟ್ಟು ಭಸ್ಮವಾಗಿದ್ದು, ರೈತನ ಆಕ್ರಂದನ ಮುಗಿಲು ಮುಟ್ಟಿದೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ
ಮಾಗಡಿ ಗ್ರಾ.ಪಂ ವ್ಯಾಪ್ತಿಯ ಪರಸಾಪೂರ ಗ್ರಾಮದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದೇ ಇದಕ್ಕೆ ಕಾರಣ ಎಂದು ರೈತ ಹನುಮಂತ ಆರೋಪಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಒತ್ತಾಯಿಸಿದ್ದಾರೆ.

ಐದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಶೇಂಗಾ ಹಾಗೂ ಹೊಟ್ಟು ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಿದರು. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here