ರಾಜ್ಯಕ್ಕೆ ಮುಂಗಾರು ಯಾವಾಗ ಪ್ರವೇಶ ಮಾಡಲಿದೆ?

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ದೇಶಕ್ಕೆ ಮುಂಗಾರು ಮಳೆ ಹೊತ್ತು ತರುವ ನೈಋತ್ಯ ಮಾನ್ಸೂನ್ ಮಾರುತಗಳು ಮೇ. 31ರಂದೇ ಕೇರಳ ಪ್ರವೇಶ ಮಾಡುತ್ತಿವೆ. ಹೀಗಾಗಿ ಬೆಂಗಳೂರಿಗೆ ಜೂನ್ ಮೊದಲ ವಾರದಲ್ಲಿಯೇ ಮುಂಗಾರು ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ ನಂತರ ಬೆಂಗಳೂರಿಗೆ ಈ ಮುಂಗಾರು ಪ್ರವೇಶಿಸಲು ಕನಿಷ್ಠವೆಂದರೂ ಆರೇಳು ದಿನ ಬೇಕಾಗುತ್ತದೆ. ಹೀಗಾಗಿ ಜೂ. 7ರಂದು ಬೆಂಗಳೂರಿಗೆ ಮುಂಗಾರು ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಆಗಮನ ಹವಾಮಾನ ವ್ಯವಸ್ಥೆಗಳ ರಚನೆಯಿಂದ ಕೂಡಿದ್ದು, ಕೆಲವೊಮ್ಮೆ ವಿಳಂಬವಾಗುವ ಸಾಧ್ಯತೆಯೂ ಇದೆ. ಅಲ್ಲದೇ, ಬೇಗನೆ ಪ್ರವೇಶ ಕೂಡ ಮಾಡಬಹುದು. ಪ್ರಸ್ತುತದ ವಾತಾವರಣ ಗಮನಿಸಿದರೆ ನಿಗದಿತ ಸಮಯಕ್ಕೆ ಈ ಬಾರಿ ಮಾನ್ಸೂನ್ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಮೇ. 20 ರಂದೇ ಮಾನ್ಸೂನ್ ಮಾರುತಗಳು ಬೀಸಲಿದ್ದು, ಮೇ. 21ರಂದು ಅಂಡಮಾನ್ ನಿಕೋಬಾರ್ ದ್ವೀಪ ಪ್ರದೇಶ ಮತ್ತು ಬಂಗಾಳ ಕೊಲ್ಲಿಯ ದಕ್ಷಿಣ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶಗಳಲ್ಲಿ ಮೇ. 21ರಂದೇ ಮಾನ್ಸೂನ್ ಮಾರುತಗಳ ಪ್ರವೇಶವಾಗಲಿದೆ. ಈ ಸಲಹ ಮಾನ್ಸೂನ್ ಮಾರುತಗಳು ಸಾಮಾನ್ಯ ಮಳೆ ತರಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here