ರಾಜ್ಯದಲ್ಲಿ ಕನ್ನಡ ಕಡ್ಡಾಯ; ರಾಜ್ಯ ಸರ್ಕಾರ ಆದೇಶ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿರುವ ಜಿಲ್ಲೆಯ ಪ್ರಮುಖ ರಸ್ತೆ, ವೃತ್ತಗಳಿಗೆ ನಾಡಿಗೆ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ, ಸಾಹಿತಿಗಳ ಹೆಸರಿಡುವುದು ಸೇರಿದಂತೆ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕನ್ನಡ ಕಾಯಕ ಹೆಸರಿನಲ್ಲಿ ರಾಜ್ಯ ಸರ್ಕಾರ 2020-21 ನೇ ವರ್ಷಾಚರಣೆ ಆಚರಿಸಿಲಿರುವ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿಯೇ ವ್ಯವಹರಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಅದರಲ್ಲಿ ತಂತ್ರಾಂಶದಲ್ಲಿ ಕನ್ನಡವನ್ನು ಯಶಸ್ವಿಯಾಗಿ ಬಳಸುವಂತೆ ಕಾರ್ಯಕ್ರಮ ರೂಪಿಸುವುದು

ಇಲಾಖೆಗಳು ರೂಪಿಸುವ ನೀತಿ, ಕರಡು ಪ್ರತಿಗಳನ್ನು ಕನ್ನಡದಲ್ಲಿಯೇ ತಯಾರಿಸಬೇಕು. ಅಲ್ಲದೇ, ಅನುಮೋದಿತ ಪ್ರತಿಯನ್ನು ಕನ್ನಡದಲ್ಲಿ ಸಿದ್ದಪಡಿಸಬೇಕು.

ತಂತ್ರಾಂಶ ವ್ಯವಸ್ಥೆಯ ಮೂಲಕ ಅರ್ಜಿದಾರರಿಗೆ ಕನ್ನಡದಲ್ಲಿ ಸಂದೇಶ (ಎಸ್ಎಂಎಸ್) ಹಾಗೂ ಇಮೇಲ್ ಕಳುಹಿಸುವುದು.

ರಾಜ್ಯದ ನಗರ ಪಟ್ಟಣಗಳ ಹೆಸರುಗಳನ್ನು ಕನ್ನಡದಲ್ಲಿಯೇ ಬರೆಯುವುದು. ಮೈಲುಗಲ್ಲುಗಳ ಮೇಲೆ ಕನ್ನಡ ಅಂಕಿ ಬಳಸುವುದು. ಎಲ್ಲ ಇಲಾಖೆಗಳ ಜಾಲತಾಣಗಳ ಪ್ರಧಾನ ಮತ್ತು ಒಳ ಪುಟಗಳು, ಸಾಮಾಜಿಕ ಜಾಲತಾಣದಲ್ಲೂ ಕನ್ನಡ ಕಡ್ಡಾಯ ಬಳಕೆ ಮಾಡುವುದು.

ಇಲಾಖೆ, ಸಚಿವ ಸಂಪುಟದ ಟಿಪ್ಪಣಿಗಳು, ಕಾಯ್ದೆ ಕಾನೂನುಗಳ ಆದೇಶಗಳನ್ನು ಕನ್ನಡದಲ್ಲಿ ಬಳಕೆ ಮಾಡುವುದು. ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಸಲು ಒತ್ತಾಯಿಸಿಸುವುದು.

ನಿಗಮ ಮಂಡಳಿಗಳು, ಸರ್ಕಾರದಿಂದ ಅನುದಾನ ಪಡೆಯುವ ಸಂಘ ಸಂಸ್ಥೆಗಳು ವಾರ್ಷಿಕ ವರದಿ, ದಾಖಲೆಗಳನ್ನು ಕನ್ನಡದಲ್ಲಿ ಸಲ್ಲಿಸುವುದು.

ರಾಜ್ಯ ಸರ್ಕಾರ ‌ನೇಮಕ ಮಾಡಿಕೊಳ್ಳುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಕಡ್ಡಾಯವಾಗಿ ಕನ್ನಡಿಗರನ್ನೇ ಒದಗಿಸುವಂತೆ ಮಾನ ಸಂಪನ್ಮೂಲ ಸೇವೆ ಒದಗಿಸುವ ಸಂಸ್ಥೆಗಳಿಗೆ ಷರತ್ತು ವಿಧಿಸುವುದು.

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನರ್ಸಿಂಗ್ ಹೋಂಗಳು ನಾಗರಿಕರಿಗೆ ಕನ್ನಡದಲ್ಲಿಯೇ ಮಾಹಿತಿ ನೀಡಬೇಕು ಎಂದು ಸುತ್ತೋಲೆಯಲ್ಲಿ ಟಿ.ಎಂ.ಭಾಸ್ಕರ್ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here