HomeGadag Newsರಾಜ್ಯದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ ಗೋವಾ; ಕೆಂಡಾಮಂಡಲವಾದ ಮಹದಾಯಿ ಹೋರಾಟಗಾರರು

ರಾಜ್ಯದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ ಗೋವಾ; ಕೆಂಡಾಮಂಡಲವಾದ ಮಹದಾಯಿ ಹೋರಾಟಗಾರರು

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕಳಸಾ ಬಂಡೂರಿ ನಾಲಾ ಯೋಜನೆಯ ಹೋರಾಟವು ಮೂರು ದಶಕಗಳ ದಾಹ ನೀಗಿಸುವ ಭರವಸೆ ಮೂಡಿಸಿತ್ತು. ಈ ನಡುವೆ ಗೋವಾ ಸರಕಾರ ಏಕಾಏಕಿ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ್ದು, ಕರ್ನಾಟಕ ಸರಕಾರದ ವಿರುದ್ಧ ನ್ಯಾಯ್ಯಾಂಗ ನಿಂದನೆ ಆರೋಪ ಮಾಡಿ ಅರ್ಜಿ ಸಲ್ಲಿಸಿದೆ. ಇದರಿಂದ ಹೋರಾಟದ ಶಕ್ತಿಕೇಂದ್ರವಾಗಿದ್ದ ಗದಗನಲ್ಲಿ ಹೋರಾಟಗಾರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕಳಸಾ ಬಂಡೂರಿ ಯೋಜನೆಯು ಸಾವಿರಾರು ರೈತರ ಹೋರಾಟದ ಶ್ರಮಕ್ಕೆ ಸಿಕ್ಕ ಗೆಲುವಾಗಿತ್ತು.
ಕಳಸಾ ನಾಲೆ ಯೋಜನೆ ಆರಂಭಿಸಲು ಕ್ಷಣಗಣನೆ ಎಣಿಸುತ್ತಿರುವ ಸಂದರ್ಭದಲ್ಲೇ ಗೋವಾ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದೆ. ಗೋವಾ ಸರಕಾರ ಮತ್ತೆ ತನ್ನ ಮೂಗು ತೂರಿಸಲು ಮುಂದಾಗಿದೆ. ನ್ಯಾಯ್ಯಾಂಗ ನಿಂದನೆ ಆರೋಪ ಮಾಡಿ ಅಲ್ಲಿನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅರ್ಜಿ ಸಲ್ಲಿಸಿರುವುದು ರಾಜ್ಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.

ಕಳಸಾ ಯೋಜನೆ ಇನ್ನೇನು ಬಗೆಹರಿಯಿತು. ಉತ್ತರ ಕರ್ನಾಟಕದ ಜನರ ನೀರಿನ ದಾಹ ನೀಗಿತು ಎಂದು ಭಾವಿಸಿದ್ದೆವು. ಮಲಪ್ರಭಾ ನದಿ ನಿರಂತರವಾಗಿ ತುಂಬಿ ಹರಿದು ಈ ಭಾಗದಲ್ಲಿ ಸದಾ ಹಸಿರಿನಿಂದ ನಳನಳಿಸುತ್ತದೆ ಎಂದುಕೊಂಡವರಿಗೆ ಈಗ ಗೋವಾ ಆಘಾತ ನೀಡಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಧ್ಯೆ ಪ್ರವೇಶಿಸಿ ಈ ಭಾಗದ ಜನರಿಗೆ ನ್ಯಾಯ ಒದಗಿಸಬೇಕು ಎನ್ನುವುದು ರೈತರ ಆಗ್ರಹ.

ಈಗಾಗಲೇ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಇದರ ಅಧಿಸೂಚನೆ ಹೊರಡಿಸಲು 2020ರ ಫೆಬ್ರವರಿ 2ರಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಫೆ.27ಕ್ಕೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿ ನೀರು ಬಳಕೆಗೆ ಸಮ್ಮತಿ ನೀಡಿತ್ತು. ಹೀಗಾಗಿ ಮಹದಾಯಿ ನದಿ ತಿರುವು ಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿತ್ತು. ಈಗ ಮತ್ತೆ ಗೋವಾ ಸರ್ಕಾರ ತಕರಾರು ತೆಗೆದು ಸುಪ್ರೀಂ ಮೇಟ್ಟಿಲೇರಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು. ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು. ಒಂದು ವೇಳೆ ಇದೇ ರೀತಿ ರಾಜಕೀಯ ಮುನ್ನೆಲೆಗೆ ಬಂದರೆ ಮತ್ತೆ ಕ್ರಾಂತಿಗೆ ಸಿದ್ಧ. ವಿಜಯ ಕುಲಕರ್ಣಿ, ಮಹದಾಯಿ ಹೋರಾಟಗಾರ

ಗೋವಾ ಮುಖ್ಯಮಂತ್ರಿಯಿಂದ ನ್ಯಾಯಾಂಗ ನಿಂದನೆ ಸಲ್ಲಿಸಿದ್ದು ಹಾಸ್ಯಾಸ್ಪದವಾಗಿದೆ. ಕುಡಿಯುವ ನೀರಿಗೆ ಯಾರ ಅನುಮತಿಯ ಅಗತ್ಯವಿಲ್ಲ. ಸಮಸ್ಯೆಯನ್ನು ಜೀವಂತ ಇಡಬೇಕೆನ್ನುವುದು ಬಿಜೆಪಿ ಭಾವಿಸಿರುವಂತಿದೆ. ಕರ್ನಾಟಕ, ಗೋವಾ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರವಿದ್ದರೂ ಮತ್ತೆ ಅದೇ ರಾಜಕೀಯ ಮುಂದುವರಿದಿದೆ. ಅರ್ಜಿ ವಿಚಾರಣೆ ಹಂತದಲ್ಲಿ ಇದ್ದಾಗ ನೀರು ತಿರುಗಿಸಿ ನ್ಯಾಯಾಂಗ ನಿಂದನೆಯ ಆರೋಪ ಮಾಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. -ಚಂದ್ರು ಚೌಹಾಣ್, ಹೋರಾಟಗಾರ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!