ರಾಜ್ಯಪಾಲರು ಈ ಸರಕಾರವನ್ನು ವಜಾಗೊಳಿಸಲಿ: ತಂಗಡಗಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ

ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರಕಾರ ಅಧಿಕಾರ ಉಳಿಸಿಕೊಳ್ಳಲು ಸಮಯ ಪೋಲು ಮಾಡುತ್ತಿದೆಯೇ ವಿನಃ ಅಭಿವೃದ್ಧಿಯತ್ತ ಕಿಂಚಿತ್ತೂ ಗಮನ ನೀಡುತ್ತಿಲ್ಲ. ಇಂಥ ಬೇಜವಾಬ್ದಾರಿ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಲಿ. ಸ್ಥಿರ ಸರಕಾರ ಆಡಳಿತ ನಡೆಸಲು ಅವಕಾಶ ಮಾಡಿಕೊಡಲಿ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ತಿಳಿಸಿದರು.

ಕೊಪ್ಪಳದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ ಮೊದಲು ತಮ್ಮದನ್ನು ನೋಡಿಕೊಳ್ಳಲಿ. ಗೆದ್ದ ಪಕ್ಷವನ್ನು ಬಿಟ್ಟು ರಾಜೀನಾಮೆ ನೀಡಿ ಬೇರೆ ಪಕ್ಷಕ್ಕೆ ಹೋದ ಇವರು ಹೇಡಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಲ ತೀರಿಸಲಾಗದೇ ಗೌರವದ ಕಾರಣಕ್ಕಾಗಿ ಅನ್ನದಾತ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾನೆ. ಸರಕಾರ ಮತ್ತು ಜನಪ್ರತಿನಿಧಿಗಳು ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಸಚಿವ ಬಿ.ಸಿ.ಪಾಟೀಲರಿಗೆ ಯಾವುದೇ ಜವಾಬ್ದಾರಿ ಇಲ್ಲ. ದಯಮಾಡಿ ಬಿಜೆಪಿ ಬಿ.ಸಿ.ಪಾಟೀಲರ ರಾಜೀನಾಮೆ ಪಡೆದು ಮನೆಗೆ ಕಳಿಸಲಿ ಎಂದು ಅವರು ಒತ್ತಾಯಿಸಿದರು.

ರಾಜ್ಯದಲ್ಲಿ ಸರಕಾರ ಇದ್ದರೂ ಸತ್ತಂತಿದೆ. ಇಂಥ ಬೇಜವಾಬ್ದಾರಿ ಮಂತ್ರಿಗಳನ್ನು ಮಂತ್ರಿಮಂಡಲದಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರು ಬೇಜವಾಬ್ದಾರಿ ಆಡಳಿತ ನಡೆಸುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದೆ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದರು.


Spread the love

LEAVE A REPLY

Please enter your comment!
Please enter your name here