25.2 C
Gadag
Sunday, December 3, 2023

ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ

Spread the love

ವಿಜಯಸಾಕ್ಷಿ ಸುದ್ದಿ, ನವದೆಹಲಿ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಮೊದಲು ವಿರೋಧ ಪಕ್ಷದ ನಾಯಕರಾಗಿದ್ದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಖರ್ಗೆಯವರನ್ನು ಆಯ್ಕೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯಸಭೆಯ ಸಭಾಪತಿಗೆ ಪತ್ರ ಬರೆದಿದೆ.

ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗುತ್ತಿದ್ದಾರೆ. ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ವಿದಾಯ ಭಾಷಣ ಮಾಡಿದ ಗುಲಾಂ ನಬಿ ಆಜಾದ್, “ಪಾಕಿಸ್ತಾನಕ್ಕೆ ತೆರಳದ ಅದೃಷ್ಟವಂತರಲ್ಲಿ ನಾನೂ ಒಬ್ಬ. ಪಾಕಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಓದಿದಾಗ, ನಾನೊಬ್ಬ ಹಿಂದುಸ್ತಾನಿ ಮುಸ್ಲಿಮನಾಗಿರುವುದಕ್ಕೆ ಹೆಮ್ಮೆಯಿದೆ.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನನಗೆ ಜನರ ಪ್ರೀತಿ ದೊರೆತಿದೆ” ಎಂದು ಹೇಳಿದ್ದರು.

ಕಳೆದ ವಾರ ರಾಜ್ಯಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು ಗುಲಾಂ ನಬಿ ಆಜಾದ್ ಬಗ್ಗೆ ಪ್ರಸ್ತಾಪಿಸುವಾಗ ಕಣ್ಣೀರು ಹಾಕಿದ್ದರು.

ವರದಿ ಡಾ.ಅಬ್ದುಲ್ ರಜಾಕ್


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts