ರಾಯಣ್ಣ ಮೂರ್ತಿ ತೆರವು, ಎಸಿ, ಡಿವೈಎಸ್ಪಿ ವಾಹನಗಳ ಮೇಲೆ ಕಲ್ಲು ತೂರಾಟ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ ವಿಚಾರವಾಗಿ ನಡೆದ ವಾಗ್ವಾದದಲ್ಲಿ ಎಸಿ ಹಾಗೂ ಡಿವೈಎಸ್ಪಿ ವರ ವಾಹನಗಳ ಮೇಲೆ ಕಲ್ಲಿ ತೂರಾಟ ನಡೆಸಿರುವ ಘಟನೆ ತಾಲೂಕಿನ ಬಳಗಾನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸ್ ನಿಲ್ದಾಣದ ಬಳಿ ನಿನ್ನೆ ರಾತ್ರಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಸ್ಥಾಪಿಸಲಾಗಿತ್ತು. ಇದಕ್ಕಾಗಿ ಈ ಹಿಂದೆ ಅಲ್ಲಿದ್ದ ರಾಣಿ ಚೆನ್ನಮ್ಮ ನಾಮಫಲಕವನ್ನು , ಸಂಗೊಳ್ಳಿ ರಾಯಣ್ಣ ನಾಮಫಲಕ ಎರಡು ತೆರವುಗೊಳಿಸಲಾಗಿತ್ತು. ಇದೇ ವಿಚಾರವಾಗಿ ಎರಡು ಸಮಾಜದವರ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.

ನಿನ್ನೆ ರಾತ್ರೋರಾತ್ರಿ ನಿರ್ಮಾಣವಾಗಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಅಧಿಕಾರಿಗಳು ತೆರವುಗೊಳಿಸಲಾಗಿದೆ. ಇದರಿಂದ ಕುಪಿತಗೊಂಡ ರಾಯಣ್ಣ ಬ್ರಿಗೇಡ್ ಸದಸ್ಯರು ವಿರೋಧ ವ್ಯಕ್ತಪಡಿಸಿದಾಗ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳಿ ಲಘು ಲಾಠಿ ಪ್ರಹಾರ ಕೂಡಾ ನಡೆದಿದೆ.

ಈ ವೇಳೆ ಕೆಲ ದುಷ್ಕರ್ಮಿಗಳು ಎಸಿ ರಾಯಪ್ಪ ಹುಣಸಗಿ ಹಾಗೂ ಡಿವೈಎಸ್ಪಿ ಅವರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಎರಡೂ ಸಮಾಜದವರ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗದಗ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here