ರಾಷ್ಟ್ರೀಯ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಚಾಲನೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕನಕ ಸಮುದಾಯ ಭವನದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸದಸ್ಯತ್ವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ನನ್ನ ಜಿಲ್ಲಾ ಪಂಚಾಯಿತಿ ಕ್ಷೇತ್ರವಾದ ತಿಮ್ಮಾಪುರ ಗ್ರಾಮದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.
ಈ ಸದಸ್ಯತ್ವ ಅಭಿಯಾನದಲ್ಲಿ 18 ವರ್ಷದಿಂದ 35 ವರ್ಷದವರೆಗಿನ ಎಲ್ಲಾ ಯುವಕ ಹಾಗೂ ಯುವತಿಯರು ಸದಸ್ಯತ್ವ ಪಡೆದುಕೊಳ್ಳಬಹುದು. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಅನೇಕ ಜನಪರ ಯೋಜನೆಗಳನ್ನು ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ ಎಸ್ ಪಾಟೀಲ ಅವರು ತಮ್ಮ ಅನುದಾನದಲ್ಲಿ ತಿಮ್ಮಾಪುರ ಗ್ರಾಮಕ್ಕೆ ಕೋಟ್ಯಂತರ ರೂಪಾಯಿಗಳ ವೆಚ್ಚದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಇದನ್ನು ಮೆಚ್ಚಿ ಸ್ವಯಂ ಪ್ರೇರಿತರಾಗಿ ನೂರಾರು ಯುವಕರು ಯುವ ಕಾಂಗ್ರೆಸ್ ಸದಸ್ಯತ್ವವನ್ನು ಪಡೆದುಕೊಳ್ಳಿ ಎಂದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ್, ಗ್ರಾಪಂ ಉಪಾಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ, ಶರಣಪ್ಪ ಜೋಗಿನ, ಬಸಪ್ಪ ಸತ್ಯಪ್ಪನವರ ಸೇರಿದಂತೆ ಗ್ರಾಮದ ಯುವಕರು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here