25.8 C
Gadag
Saturday, June 10, 2023

ರೈತರಿಗೆ ಸ್ವಾತಂತ್ರ್ಯ ಸಿಕ್ಕಿಲ್ಲವೆಂದ ಕೇಂದ್ರ ಸಚಿವ ಸದಾನಂದಗೌಡ

Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ರಿಹಾನ ಏನಾದರೂ ಭತ್ತದ ಗದ್ದೆ ನೋಡಿದ್ದಾರಾ?. ಬಹುಶಃ ಅವರು ಭತ್ತದ ಗದ್ದೆ ಮುಂದೆ ನಿಂತು ಪೋಟೋ ತೆಗೆಸಿಕೊಂಡು ಹೋಗಿರಬಹುದು ಎಂದು ಪಾಪ್ ಸಿಂಗರ್ ರಿಹಾನ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ರಿಹಾನಗೆ ರೈತರ ಶ್ರಮದ ಬಗ್ಗೆ ಏನು ಗೊತ್ತಿದೆ. ರೈತರು ಮಾರಾಟ ಹೇಗೆ ಮಾಡ್ತಾರೆ ಅಂತಾ ರಿಹಾನಗೆ ಗೊತ್ತಾ? ಎಂದು ಪ್ರಶ್ನಿಸಿರುವ ಅವರು,
ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಅವರು ಯಾವತ್ತಾದರೂ ಭತ್ತದ ಗದ್ದೆಯನ್ನಾದ್ರೂ ನೋಡಿದ್ರೆ ಹೇಳಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಆದರೆ ರೈತನಿಗೆ ಇನ್ನು ಸ್ವಾತಂತ್ರ್ಯ ಸಿಕ್ಕಿಲ್ಲ.
ರೈತನಿಗೆ ಆತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ನಾವು ಸ್ವಾತಂತ್ರ್ಯ ನೀಡುತ್ತಿದ್ದೇವೆ ಎಂದು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.

ರೈತರು ಈಗ ಸರ್ಕಾರದ ಕೈಗೊಂಬೆಯಾಗಿದ್ದಾರೆ.
ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ.
ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುತ್ತಾರೆ ಎಂದರೆ ಕೊಡಲಿ ಬಿಡಿ.
ಸುಮ್ಮನೆ ಏಕೆ ಹಠ ಮಾಡುತ್ತೀರಾ?
ರೈತರಿಗೆ ಬೆಂಬಲ ಬೆಲೆ ನೀಡಿದ್ದು ಮೋದಿ ಸರ್ಕಾರ ಎಂದರು.

ಪ್ರತಿಭಟನೆಗಳು ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆಯುತ್ತಿವೆ. ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ನಾವು ಹೊಂದಾಣಿಕೆಯಾಗಿದ್ದೀವಿ, ಮಾತುಕತೆಗೂ ಸಿದ್ಧರಿದ್ದೀವಿ.
ಆದರೆ ರೈತರೇ ಹಠ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts