HomeAgricultureರೈತರು ಕೃಷಿ ವಿವಿಯ ತಾಂತ್ರಿಕತೆ ಬಳಸಿಕೊಳ್ಳಿ: ಪಾಟೀಲ

ರೈತರು ಕೃಷಿ ವಿವಿಯ ತಾಂತ್ರಿಕತೆ ಬಳಸಿಕೊಳ್ಳಿ: ಪಾಟೀಲ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಜಿಲ್ಲೆಯಾದ್ಯಂತ ಹಿಂಗಾರು ಹಂಗಾಮಿನಲ್ಲಿ ಅಂದಾಜು 1,55,200 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಿದ್ದು , ಉತ್ತಮವಾಗಿ ಮಳೆಯಾಗುತ್ತಿರುತ್ತದೆ . ಕೊಪ್ಪಳ ಜಿಲ್ಲೆಯಲ್ಲಿ ಜೋಳ , ಕಡಲೆ ಹಾಗೂ ಶೇಂಗಾ ಬೆಳೆಗಳು ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಾಗಿರುತ್ತವೆ.

ಅಲ್ಲದೆ ಕುಸುಬೆ , ಆಗಸೆ ಮತ್ತು ಹುರುಳಿಯನ್ನು ಅಲ್ಲಲ್ಲಿ ಬೆಳೆಯುತ್ತಾರೆ , ಪ್ರಮುಖ ಬೆಳೆಯಾದ ಜೋಳ- ಎಂ .35 – 1 ತಳಿಯ ಬೀಜಗಳು ಹಗರಿ ಮತ್ತು ಸಿರುಗುಪ್ಪ ಸಂಶೋಧನಾ ಕೇಂದ್ರಗಳಲ್ಲಿ , ಜಿ.ಎಸ್ . 23 ಬೀಜಗಳು ರದ್ದೇವಾಡಗಿ ಸಂಶೋಧನಾ ಕೇಂದ್ರದಲ್ಲಿ , ಕಡಲೆ ತಳಿಗಳಾದ ಜೆಜೆ -11 ಹಾಗೂ ಬಿ.ಜಿ.ಡಿ. 103 , ಜಿಬಿಎಂ -2 , ಕಾಬೂಲಿ ಕಡಲೆ ಎಂಎನ್ಕಿ -1 , ಕುಸುಬೆಏಎಸ್ಎಫ್ -764 , ನವಣೆ ಹೆಚ್ , ಎಂ.ಟಿ. – 100-1 , ಊದಲು ಡಿ.ಹಚ್.ಬಿ.ಎಂ. – 93-2 , ಹಾರಕ ಹೆಚ್.ಆರ್.ಕೆ -1 ಹಾಗೂ ಕೊರಲೆ – ಹೆಚ್.ಬಿ.ಕೆ.- ತಳಿಗಳು ಬೀಜಘಟಕ , ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ , ರಾಯಚೂರಿನಲ್ಲಿ ಲಭ್ಯವಿರುತ್ತವೆ ಎಂದು ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದ ವಿಸ್ತರಣಾ ಮುಂದಾಳು ಎಂ.ಬಿ. ಪಾಟೀಲ ಹೇಳಿದರು.

ಅಲ್ಲದೆ , ದೃಢೀಕೃತ ಬೀಜಗಳು ಕರ್ನಾಟಕ ರಾಜ್ಯ ಬೀಜ ನಿಗಮ ಹಾಗೂ ರಾಷ್ಟ್ರೀಯ ಬೀಜ ನಿಗಮ ಗಳಲ್ಲಿಯೂ ಸಹ ಲಭ್ಯವಿದ್ದು , ಅಲ್ಲಿಯೂ ಸಹ ರೈತರು ನೇರವಾಗಿ ಖರೀದಿಸಬಹುದಾಗಿದೆ . ಬೀಜೋಪಚಾರಕ್ಕಾಗಿ ಜೈವಿಕ ಶಿಲೀಂದ್ರನಾಶಕಗಳಾದ ಟ್ರೈಕೋಡರ್ಮಾ , ಸುಡೋಮೋನಸ್ ಇವು ಸಾವಯವ ಕೃಷಿ ಸಂಸ್ಥೆ , ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ , ರಾಯಚೂರಿನಲ್ಲಿ ಲಭ್ಯವಿರುತ್ತವೆ ಎಂದರು.

ಮಣ್ಣಿಗೆ ಅಗತ್ಯವಾದ ಎರೆಹುಳು ಗೊಬ್ಬರ ಹಾಗೂ ಎರೆ ಜಲ ಕಡಲೆಯ ಹಸಿರು ಕೀಡೆ ನಿಯಂತ್ರಣಕ್ಕೆ ಟ್ರೈಕೋಗ್ರಾಮ ಪರತಂತ್ರ ದೇವಿ ಹಾಗೂ ಗೊಣ್ಣೆಹುಳು ನಿಯಂತ್ರಣಕ್ಕೆ ಮೆಟಲೈಜಿಯಂ ಜೈವಿಕ ಶಿಲೀಂದ್ರನಾಶಕ ಇವುಗಳು ಜೈವಿಕ ನಿಯಂತ್ರಣ ಪ್ರಯೋಗಾಲಯ , ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ , ರಾಯಚೂರಿನಲ್ಲಿ ಲಭ್ಯವಿರುತ್ತವೆ . ರೈತಬಾಂಧವರು ನೂತನ ತಳಿಯ ಬೀಜಗಳಿಗಾಗಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ , ರಾಯಚೂರಿನ ಬೀಜಘಟಕದ ವಿಶೇಷಾಧಿಕಾರಿಗಳಾದ ಡಾ . ಬಸವೇಗೌಡ ( 9480696343 ) ಮತ್ತು ಜೈವಿಕ ಪರಿಕರಗಳಿಗಾಗಿ ಡಾ . ಅರುಣಕುಮಾರ್ ಹೊಸಮನಿ ( 9449762175 ) ಇವರನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಈಗಾಗಲೇ ಮುಂಗಾರಿನಲ್ಲಿ ಬಿತ್ತನೆಯಾಗಿರುವ ತೊಗರಿಯು ಹೂ ಬಿಡುವ ಹಂತದಲ್ಲಿದ್ದು , ರೈತರು ಕಲಬುರಗಿ ಕೃಷಿ ಸಂಶೋಧನಾ ಕೇದ್ರದಿಂದ ಬಿಡುಗಡೆಯಾಗಿರುವ ಪಲ್ಸ್ ಮಾಜಿಕ ನ್ನು ಬಳಸಬಹುದಾಗಿದೆ . ಪಲ್ಸ್ ಮ್ಯಾಜಿಕ್ ಪಡೆಯಲು ಡಾ . ಲಕ್ಷಣ ಚಿಂಚೋಳಿ ( 8008644224 ) ರವರನ್ನು ಸಂಪರ್ಕಿಸಲು ಕೋರಿದರು.

ಭೂಮಿ ಸಿದ್ಧತೆ ಮತ್ತು ತಯಾರಿ: ರೈತಬಾಂಧವರು ಆಳವಾದ ಉಳುಮೆ ಮಾಡಿ ಭೂಮಿಯನ್ನು ಹದಮಾಡಿಕೊಳ್ಳುವುದು . ರೈತಬಾಂಧವರು ದೃಢೀಕೃತ ಬಿತ್ತನೆ ಬೀಜಗಳನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ , ರಾಯಚೂರು / ರೈತ ಸಂಪರ್ಕ ಕೇಂದ್ರ ಹಾಗೂ ನೋಂದಾಯಿತ ಸಂಸ್ಥೆಗಳಿಂದ ಖರೀದಿಸಿ ಜೈವಿಕ ಶಿಲೀಂದ್ರನಾಶಕಗಳಿಂದ ಸೂಕ್ತ ಬೀಜೋಪಚಾರ ಮಾಡುವುದು , ನಂತರ ಸೂಕ್ತ ಜೈವಿಕ ಗೊಬ್ಬರಗಳಿಂದ ಉಪಚರಿಸಿ ಬಿತ್ತನೆ ಕಾರ್ಯ ಕೈಗೊಳ್ಳುವುದು , ಕಡಲೆ ಬಿತ್ತನೆ ಪೂರ್ವದಲ್ಲಿ 50 ಗ್ರಾಂ , ಚೋಳ ಆಥವಾ ಸೂರ್ಯಕಾಂತಿ ಬೀಜವನ್ನು ಮಿಶ್ರಣ ಮಾಡಿ ಬಿತ್ತುವುದು.

ಬೆಳೆಗಳ ಬದುವಿನಲ್ಲಿ ಔಡಲ ಬೀಜವನ್ನು ಆಕರ್ಷಕ ಬೆಳೆಯಾಗಿ ಬೆಳೆಯುವುದರಿಂದ ಎಲೆ ತಿನ್ನುವ ಕೀಟದ ಬಾಧೆಯನ್ನು ಕಡಿಮೆ ಮಾಡಬಹುದು . ಶೇಂಗಾ ಬೆಳೆಯ ಸುತ್ತಲು ಸಜ್ಜೆ ಅಥವಾ ಜೋಳವನ್ನು ಬಲೆ ಬೆಳೆಯಾಗಿ ಬೆಳೆಯುವುದು ಸೂಕ್ತ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಆದ ಡಾ . ಎಂ.ಬಿ.ಪಾಟೀಲ ರವರು ರೈತರಲ್ಲಿ ಮನವಿ ಮಾಡಿಕೊಂಡರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!