ರೈತರ ಹೋರಾಟಕ್ಕೆ ಎಸ್‌.ಆರ್.ಹಿರೇಮಠ ಬೆಂಬಲ; ಗಣಿಧಣಿಗಳ ವಿರುದ್ಧ ವಾಗ್ದಾಳಿ

0
Spread the love

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ದೆಹಲಿಯಲ್ಲಿ ನಡೆಯುತ್ತಿರುವ ರೈತ ವಿರೋಧಿ ಕಾಯ್ದೆ ವಿರುದ್ಧದ ಹೋರಾಟಕ್ಕೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಬೆಂಬಲ ಸೂಚಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ವಿರೋಧಿ ಕಾಯ್ದೆಯನ್ನು ವಿರೋಧದ ಮಧ್ಯೆ ಅಂಗೀಕರಿಸಿದ್ದು ರೈತರಿಗೆ ‌ಮಾಡಿದ ಅನ್ಯಾಯವಾಗಿದೆ. ಡಿಸೆಂಬರ್ 8ರ ಭಾರತ್ ಬಂದ್ ಗೆ ಬೆಂಬಲ ನೀಡಿ ರಾಜ್ಯದಲ್ಲಿ ಬಂದ್ ಮಾಡುತ್ತೇವೆ ಎಂದರು.

ಅದಾನಿ, ಅಂಬಾನಿ ಮತ್ತು ಟಾಟಾ ಬಿರ್ಲಾಗಳೇ ದೇಶದ ಪ್ರಧಾನಿಯಾಗಿದ್ದಾರೆ ಎಂದು ರೈತ ವಿರೋಧಿ ಕಾನೂನು ತರುತ್ತಿರುವ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಂದೆ ಇಂದಿರಾ ಗಾಂಧಿಗೆ ಪಾಠ ಕಲಿಸಿದಂತೆ 2024ರಲ್ಲಿ ಜನರು ತಕ್ಕಪಾಠ ಕಲಿಸುತ್ತಾರೆ. ಆರ್ ಎಸ್ ಎಸ್ & ಸಂಘ ಪರಿವಾರದಿಂದಲೇ ಕೇಂದ್ರ ಸರ್ಕಾರ ನಡೆಯುತ್ತಿದೆ ಎಂದರು.

ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರ ಗಣಿಭಾಧಿತ ಪ್ರದೇಶದ ಜನರಿಗೆ ಯಾವುದೇ ಸವಲತ್ತುಗಳನ್ನು ನೀಡುತ್ತಿಲ್ಲ. ಹದಿನೈದು ಸಾವಿರ ಕೋಟಿ ಗಣಿಭಾದಿತ ಹಣ ಇದ್ದು, ಅದನ್ನು ಸಮರ್ಪಕ ಬಳಸುವಂತಹ ಕೆಲಸವಾಗಬೇಕು. ಎಂದು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೆ ರಾಜ್ಯ ಸರ್ಕಾರ ಕೆಲ ಕಳ್ಳರನ್ನು ನೇಮಕ ಮಾಡಿದೆ. ಗಣಿ ಲೂಟಿ ಹೊಡೆದು ನೂರು ಕೋಟಿ ಮನೆ ಕಟ್ಟಿಸಿದ್ದಾರೆ. ಇಂತವರನ್ನು ಸಂಪುಟದಿಂದ ಕೈಬಿಡಬೇಕು‌. ಹಗಲು ದರೋಡೆ ಮಾಡಿ ಜನಾರ್ದನ ರೆಡ್ಡಿ ಜೈಲಿಗೆ ಹೋದರು. NMDC ಮೈನಿಂಗ್ ಕಂಪನಿಗೆ ಕಡಿಮೆ ಪ್ರೀಮಿಯಂನಲ್ಲಿ ಪ್ರೋಡೆಕ್ಷನ್ ಮಾಡಲು ಅನುಮತಿ ನೀಡಿರುವುದು ತಪ್ಪು ಎಂದು
ಸಚಿವ ಆನಂದ ಸಿಂಗ್, ಶ್ರೀರಾಮುಲು ಸೇರಿದಂತೆ ಜನಾರ್ದನ ರೆಡ್ಡಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here