25.7 C
Gadag
Wednesday, June 7, 2023

ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಸಾಲ ತೀರಿಸಲಾಗದೇ ಸಾವಿಗೆ ಶರಣು?

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬುಧವಾರ ತಡರಾತ್ರಿ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.

ಜಿಲ್ಲೆಯ ಬೀರಡಿ ಗ್ರಾಮದ ಸಾತಪ್ಪ ಅಣ್ಣಪ್ಪ ಸುತಾರ್(60), ಪತ್ನಿ ಮಹಾದೇವಿ(50), ಮಕ್ಕಳಾದ ದತ್ತಾತ್ರೇಯ (28), ಸಂತೋಷ (25) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳಾಗಿದ್ದಾರೆ.

ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಸೂಸೈಡ್ ಮಾಡಿಕೊಂಡಿರುವವರ ಮೃತದೇಹಗಳನ್ನು ರಾಯಬಾಗ ತಾಲ್ಲೂಕಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಗ್ರಾಮದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರ ನಡೆಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ತಂದೆ ಮಾಡಿದ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts