ರೈಲಿಗೆ ತಲೆಕೊಟ್ಟು ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ!

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚಿಕ್ಕಮಗಳೂರು

ವಿಧಾನಪರಿಷತ ಉಪ ಸಭಾಪತಿ‌ ಎಸ್.ಎಲ್.ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಿಂದ ಒಬ್ಬರೇ ಹೊರಟವರು ರಾತ್ರಿ ಬಹಳ ಹೊತ್ತಾದರೂ ಮರಳಲಿಲ್ಲ. ಫೋನ್ ರಿಂಗ್ ಆಗುತ್ತಿದ್ದರೂ ರಿಸೀವ್ ಆಗುತ್ತಿರಲಿಲ್ಲ. ಅನುಮಾನಗೊಂಡು ಗನ್ ಮ್ಯಾನ್, ಪೊಲೀಸರು, ಸ್ಥಳೀಯರು ಹುಡುಕಿದಾಗ ಅವರು ರೈಲಿಗೆ ಸಿಕ್ಕು ಮೃತಪಟ್ಟಿರುವುದು ಗೊತ್ತಾಗಿದೆ.

ರೈಲಿನ ರಭಸಕ್ಕೆ ದೇಹ ಎರಡು ತುಂಡಾಗಿ ಎರಡು ದಿಕ್ಕಿಗೆ ಬಿದ್ದಿತ್ತು. ತಲೆ ಗುರುತು ಹಿಡಿದು ಮೃತದೇಹ ಧರ್ಮೇಗೌಡರದ್ದೇ ಎಂದು ಖಚಿತಪಡಿಸಿಕೊಂಡ ಗನ್ ಮನ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯದ ಮಟ್ಟಿಗೆ ಇದೊಂದು ಆತ್ಮಹತ್ಯೆ ಎನ್ನಲಾಗುತ್ತಿದೆ. ಆದರೆ ಇತರೆ ಸಾಧ್ಯತೆಗಳನ್ನು ತಳ್ಳಿ ಹಾಕದ ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ,ಸಿ.ಟಿ. ರವಿ ಸೇರಿದಂತೆ ಜಿಲ್ಲೆಯ ಶಾಸಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.

16 ಡಿಸಬರ್ 1955 ರಂದು ಜನಿಸಿದ್ದ ಧರ್ಮೇಗೌಡರಿಗೆ 65 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಪರಿಷತ್ ನಲ್ಲಿ ನಡೆದ ಘಟನೆಯಿಂದ ನೊಂದು ಈ ರೀತಿ ಮಾಡಿಕೊಂಡರಾ ಎಂಬ ಅನುಮಾನಗಳು ಕಾಡುತ್ತಿವೆ.

ಗ್ರಾಮ ಪಂಚಾಯತಿ ಮಟ್ಟದಿಂದ ಬೆಳೆದು ಬಂದಿದ್ದ ಎಸ್.ಎಲ್.ಧರ್ಮೇಗೌಡರು ಬಿಳಕಲ್ ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಎರಡು ಬಾರಿ ತಾ.ಪಂ.ಸದಸ್ಯರಾಗಿದ್ದರು. ಅಲ್ಲದೇ, ಬೀರೂರು ಶಾಸಕರಾಗಿದ್ದ ಅವರು ವಿಧಾನ ಪರಿಷತ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದರು.

ಅಲ್ಲದೇ, ವಿವಿಧ ನಿಗಮ-ಮಂಡಳ, ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಎಸ್.ಎಲ್.ಧರ್ಮೇಗೌಡ ಅವರ ಅಕಾಲಿಕ ಸಾವಿಗೆ ಸಿಎಂ ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ‌ ಸಿಎಂ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಎಸ್.ಎಲ್.ಬೋಜೇಗೌಡ ಮತ್ತು ಎಸ್.ಎಲ್.ಧರ್ಮೇಗೌಡ ಸಹೋದರರು ದೇವೇಗೌಡರ ಕುಟುಂಬಕ್ಕೆ ಹತ್ತಿರದವರಾಗಿದ್ದು
ಜೆ ಡಿ ಎಸ್ ಜತೆಗೇ ರಾಜಕೀಯ ಜೀವನ ಆರಂಭಿಸಿದ್ದರು. ಯಾವತ್ತೂ ಪಕ್ಷ ನಿಷ್ಠೆ ಬದಲಿಸಿರಲಿಲ್ಲ.


Spread the love

LEAVE A REPLY

Please enter your comment!
Please enter your name here