ಲಾರಿ-ಟ್ರ್ಯಾಕ್ಟರ್ ಅಪಘಾತ; ಲಾರಿ ಚಾಲಕ ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಕುಕನೂರು:
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ವೇಳೆ ಚಲಿಸುತ್ತಿರುವ ಲಾರಿಯಿಂದ ಹೊರಗೆ ಹಾರಿದ ಚಾಲಕ ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೃತ ಚಾಲಕನನ್ನು ಮಣಿಕಂಠ (34) ಎಂದು ಗುರುತಿಸಲಾಗಿದೆ.

ಲಾರಿಯಿಂದ ಸುಮಾರು ‌ಅರ್ಧ ಕಿ.ಮೀ. ಹೊರಗೆ ಹಾರಿ ಹೋಗಿರೋ ಚಾಲಕ ಮಣಿಕಂಠ, ಲಾರಿ‌ಯಿಂದ ಸಿಡಿದು ಸುಮಾರು 300 ಮೀ. ದೂರಕ್ಕೆ ಬಿದ್ದಿದ್ದಾನೆ.

ಕಲ್ಲು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ‌ ಹೊಡೆದಿದೆ.
ಟ್ರ್ಯಾಕ್ಟರ್ ರಸ್ತೆ ಕ್ರಾಸ್ ಮಾಡುವಾಗ ಅಪಘಾತ ಸಂಭವಿಸಿದ್ದು, ಕುಕನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here