ವಕೀಲನ ಬರ್ಬರ ಹತ್ಯೆ: ಅಕ್ರಮ ಮರಳು ದಂಧೆಕೋರರ ಮೇಲೆ ಕೊಲೆ ಶಂಕೆ?

0
Spread the love

ವಿಜಯಸಾಕ್ಷಿ ಸುದ್ದಿ, ಮಂಡ್ಯ

ವ್ಯಕ್ತಿಯೋರ್ವನನ್ನು ಬರ್ಬರ ಹತ್ಯೆಗೈದು ನೀರಿನಲ್ಲಿ ಮುಳುಗಿಸಿ ಮೃತ ದೇಹದ ಮೇಲೆ ಚಪ್ಪಡಿ ಕಲ್ಲು ಹಾಕಿ ಹೋಗಿರುವ ಘಟನೆ ಮದ್ದೂರು ತಾಲ್ಲೂಕಿನ ನವಿಲೆ ಗ್ರಾಮದ ಶಿಂಷಾ ನದಿಯಲ್ಲಿ ನಡೆದಿದೆ.

ಕೊಲೆಯಾಗಿರುವ ವ್ಯಕ್ತಿ ನವಿಲೆ ಗ್ರಾಮದ ವಕೀಲ ರವೀಂದ್ರ‌ (45) ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಮನೆಯಿಂದ ಜಮೀನಿಗೆ ಹೋಗುವುದಾಗಿ ಹೇಳಿ ಹೋಗಿದ್ದ ರವೀಂದ್ರ, ಸಂಜೆಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಜಮೀನಿನ ಬಳಿ ಹುಡುಕಾಟ ನಡೆಸಿದ್ದಾರೆ.

ಈ ವೇಳೆ ಜಮೀನಿನ ಸಮೀಪದ ಶಿಂಷಾ ನದಿಯಲ್ಲಿ ಮುಳುಗಿದ ರೀತಿಯಲ್ಲಿ ಶವ ಪತ್ತೆಯಾಗಿರುವುದು ಕಂಡು ಬಂದಿದೆ. ಶಿಂಷಾ ನದಿಯಲ್ಲಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಕ್ರಮ ಮರಳು ದಂಧೆಕೋರರೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗುತ್ತಿದೆ.

ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here