30.8 C
Gadag
Monday, May 29, 2023

ವಾಸ್ತವ ವರದಿ ಬರೆಯಲು ಹಿಂಜರಿಕೆ ಬೇಡ; ಜಿ. ಎಸ್. ಪಾಟೀಲ್

Spread the love

ವಿಜಯಸಾಕ್ಷಿ ಸುದ್ದಿ, ರೋಣ

ಪತ್ರಕರ್ತರು ವಾಸ್ತವ ವರದಿಯನ್ನು ಬರೆಯಲು ಹಿಂಜರಿಕೆ ಬೇಡ. ನಾಗರಿಕ ಸಮಾಜ ನಿಮ್ಮನ್ನು ನಂಬಿಕೊಂಡಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ತಮ್ಮ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.

ಅವರು ಸೋಮವಾರ ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸ್ಥಾಪಕರಾದ ಡಿ.ವಿ.ಗುಂಡಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದ ನಂತರ ಮಾತನಾಡಿದರು.

ನಾಡಿನ ಜನರು ಮಾಧ್ಯಮಗಳ ಮೆಲೆ ಅತ್ಯಂತ ವಿಶ್ವಾಸ ಇಟ್ಟುಕೊಂಡಿದ್ದಾರೆ. ಅಲ್ಲದೆ ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಪ್ರತಿಪಾದಿಸಿದ್ದಾರೆ. ಹೀಗಿರುವಾಗ ವರದಿಗಾರರು ಹೆದರುವ ಅಗತ್ಯವಿಲ್ಲ. ಆಡಳಿತ ವ್ಯವಸ್ಥೆ ವಿಫಲಗೊಂಡಾಗ ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಸಮಾಜವನ್ನು ಎಚ್ಚರಿಸುವ ಕಾರ್ಯವನ್ನು ಪತ್ರಕರ್ತರು ಮಾಡುವ ಜೊತೆಗೆ ಸಮಾಜದಲ್ಲಿ ಗೌರವವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಪತ್ರಕರ್ತರಿಂದ ಮಾಜಿ ಶಾಸಕ ಜಿ.ಎಸ್.ಪಾಟೀಲರನ್ನು ಸನ್ಮಾನಿಸಲಾಯಿತು.
ಗುಲಗಂಜಿ ಮಠದ ಗುರುಪಾದ ದೇವರು, ಹಜರತ ಸುಲೇಮಾನ ಶಾವಲಿ ಅಜ್ಜನವರು ಸಾನ್ನಿದ್ಯ ವಹಿಸಿದ್ದರು. ತಹಸೀಲ್ದಾರ ವಾಣಿ ಉಂಕಿ, ಇಒ ಸಂತೋಷ ಪಾಟೀಲ, ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ, ತಾಲೂಕಾಧ್ಯಕ್ಷ ಯಲ್ಲಪ್ಪ ತಳವಾರ, ಜಿಲ್ಲಾ ಪಧಾನ ಕಾರ್ಯದರ್ಶಿ ಶಾಂತಕುಮಾರ ಹಂಪಿ, ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಮೆಹೆಬೂಬ ಮೋತೆಖಾನ್, ಸೋಮು ಲದ್ದಿಮಠ, ವಿ.ಬಿ.ಸೋಮನಕಟ್ಟಿಮಠ, ಮುತ್ತಣ್ಣ ಸಂಗಳದ, ರಾಜಣ್ಣ ಸುಂಕದ ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Related Posts

LEAVE A REPLY

Please enter your comment!
Please enter your name here

Stay Connected

0FansLike
3,790FollowersFollow
0SubscribersSubscribe
- Advertisement -spot_img

Latest Posts