ರಾಜ್ಯದಲ್ಲಿ ಇಂದು ಕೂಡ 11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ಇಂದು ಸಿಎಂ ಯಡಿಯೂರಪ್ಪ ಅವರು 11 ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಸಿ ಆದೇಶ ಹೊರಡಿಸಿದ್ದಾರೆ. ಆದರೆ, ಈ ದಿನವೂ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 11 ಸಾವಿರಕ್ಕೂ ಅಧಿಕವಿದೆ.
ಇಂದು ರಾಜ್ಯದಲ್ಲಿ 11,042 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಆಸ್ಪತ್ರೆಯಿಂದ 15,721 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇಂದು ಮಹಾಮಾರಿಗೆ 194 ಜನ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 2,10,652 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 27,39,290 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಂದು ಬೆಂಗಳೂರಿನಲ್ಲಿ 2,191 ಜನಕ್ಕೆ ಸೋಂಕು ತಗುಲಿದ್ದು, 47 ಜನ ಸಾವನ್ನಪ್ಪಿದ್ದಾರೆ.

ಇಂದು ರಾಜ್ಯದ ಬಾಗಲಕೋಟೆ 72, ಬಳ್ಳಾರಿ 293, ಬೆಳಗಾವಿ 439, ಬೆಂಗಳೂರು ಗ್ರಾಮಾಂತರ 264, ಬೆಂಗಳೂರು ನಗರ 2,191, ಬೀದರ್ 20, ಚಾಮರಾಜನಗರ 274, ಚಿಕ್ಕಬಳ್ಳಾಪುರ 280, ಚಿಕ್ಕಮಗಳೂರು 397, ಚಿತ್ರದುರ್ಗ 349, ದಕ್ಷಿಣ ಕನ್ನಡ 580, ದಾವಣಗೆರೆ 313, ಧಾರವಾಡ 261,

ಗದಗ 90, ಹಾಸನ 776, ಹಾವೇರಿ 67, ಕಲಬುರಗಿ 58, ಕೊಡಗು 279, ಕೋಲಾರ 247, ಕೊಪ್ಪಳ 161, ಮಂಡ್ಯ 448, ಮೈಸೂರು 1,011, ರಾಯಚೂರು 115, ರಾಮನಗರ 59, ಶಿವಮೊಗ್ಗ 521, ತುಮಕೂರು 571, ಉಡುಪಿ 291, ಉತ್ತರ ಕನ್ನಡ 426, ವಿಜಯಪುರ 174 ಮತ್ತು ಯಾದಗಿರಿಯಲ್ಲಿ 15 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love

LEAVE A REPLY

Please enter your comment!
Please enter your name here