ವಿರೋಧ ಪಕ್ಷಗಳ ಒಕ್ಕೂಟ ರೈತರನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತಿದೆ; ಸಚಿವ ಸವದಿ ಆರೋಪ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ನಾನು ಕೂಡಾ ರೈತ ಕುಟುಂಬದಿಂದ ಬಂದಿದ್ದೇನೆ. ನಾನೂ ಮೊದಲು ಹತ್ತಿ, ಬೆಲ್ಲ ಎಪಿಎಂಸಿ ಮಾರುಕಟ್ಟೆಯಲ್ಲಿಯೇ ಮಾರಾಟ ಮಾಡಿದ್ದೇನೆ. ದಲ್ಲಾಳಿಗಳಿಂದ ಸುಲಿಗೆ ಆಗುತ್ತಿತ್ತು. ರೈತರಿಗೆ ಅನುಕೂಲವಾಗುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಮರ್ಥಿಸಿಕೊಂಡರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿಗೆ ಉಪಯೋಗಿಸುವ ಜಮೀನಿನನ್ನು ಕೈಗಾರಿಕೆಗೆ ಒಳಸುವಂತಿಲ್ಲಾ ಎಂಬುವುದು ಕೃಷಿ ಕಾನೂನಿನಲ್ಲಿ ಸ್ಪಷ್ಟವಾಗಿದೆ.ವಿರೋಧ ಪಕ್ಷಗಳ ಒಕ್ಕೂಟ ರೈತರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ರಾಜ್ಯದ ರೈತರಿಗೆ ಮನವಿ ಮಾಡುತ್ತೇನೆ. ಇದು ರೈತರ ಪರವಾಗಿ ಇರುವ ಕಾನೂನು. ಪ್ರತಿಭಟನೆ ಮಾಡುವವರಿಗೆ ಬುದ್ದಿವಾದ ಹೇಳಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಬುದ್ಧಿವಾದ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಮೋಹನ್ ಮಾಳಶೆಟ್ಟಿ, ಹಿರಿಯ ಮುಖಂಡ ಎಂ ಎಸ್ ಕರಿಗೌಡ್ರ, ಮಾಧವ ಗಣಾಚಾರಿ, ಶ್ರೀಪತಿ ಉಡುಪಿ, ರಾಜು ಕುರಡಗಿ, ಸಿದ್ದು ಪಲ್ಲೇದ, ರವಿ ದಂಡಿನ, ಬಾಬು ಯಲಿಗಾರ ಸೇರಿದಂತೆ ಇತರರು ಇದ್ದರು.


Spread the love

LEAVE A REPLY

Please enter your comment!
Please enter your name here