ಶಾಲಾ ಶುಲ್ಕ ಭರಿಸುವ ಅವಧಿ ವಿಸ್ತರಿಸಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಶಾಲೆಗಳು ತೆರೆಯುವುದಿಲ್ಲ ಎನ್ನುವ ನೆಪ ಮಾಡಿಕೊಂಡು ಪಾಲಕರು ಶುಲ್ಕ ಭರಿಸುತ್ತಿಲ್ಲ. ಹೀಗಾಗಿ ಮೊದಲ ಕಂತಿನ ಶುಲ್ಕ ಭರಿಸಲು ನೀಡಿರುವ ಅಂತಿಮ ದಿನಾಂಕವನ್ನು ಅ. 16ರ ಬದಲಾಗಿ ಅ. 31ಕ್ಕೆ ವಿಸ್ತರಿಸಬೇಕು ಎಂದು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷ ಆನಂದ ಪೋತ್ನೀಸ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಶಾಲೆ ತೆರೆಯುವುದು ಅನುಮಾನ ಎನ್ನುವ ಕಾರಣಕ್ಕೆ ಪಾಲಕರು ತಮ್ಮ ಮಕ್ಕಳ ಶುಲ್ಕ ಭರಿಸುತ್ತಿಲ್ಲ. ಕೆಲವರು ತಮ್ಮ ಮಕ್ಕಳ ವರ್ಗಾವಣೆ ಪ್ರಮಾಣಪತ್ರ ಪಡೆದು ಸರಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರಿಂದ ಖಾಸಗಿ ಶಾಲೆಗಳು ಸಂಕಷ್ಟ ಎದುರಿಸುವಂತಾಗಿದೆ. ಸರಕಾರ ಕೂಡಲೇ ಖಾಸಗಿ ಶಾಲೆಗಳತ್ತ ಗಮನ ಹರಿಸಿ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು.
ಖಾಸಗಿ ಶಾಲೆಗಳಿಗೆ ಸರಕಾರಿ ನೌಕರರು ಮತ್ತು ಸಿರಿವಂತರ ಮಕ್ಕಳು ಮಾತ್ರ ಪ್ರವೇಶ ಪಡೆದಿರುತ್ತಾರೆ. ಅಂಥವರಿಗೆ ಶಾಲಾ ಶುಲ್ಕ ಭರಿಸುವುದು ದೊಡ್ಡ ಮಾತಲ್ಲ. ಆದರೂ ಉಳ್ಳವರು ತಮ್ಮ ಮಕ್ಕಳ ಶಾಲಾ ಶುಲ್ಕ ಭರಿಸಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಸ್ಥಿತಿವಂತರ ಈ ನಿರ್ಧಾರದಿಂದ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರ ಬದುಕು ಅಂತಂತ್ರವಾಗಿದೆ ಎಂದು ಆರೋಪಿಸಿದರು.
ಇಂದಿನ ಆಧುನಿಕತೆ ಹಾಗೂ ಪೋಷಕರ ಅಪೇಕ್ಷೆಯಂತೆ ಖಾಸಗಿ ಶಾಲೆಗಳಲ್ಲಿ ಮಕ್ಕಳ ಆಟ- ಪಾಠಕ್ಕೆ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಆದರೆ, ಸರಕಾರಿ ಶಾಲೆಗಳಲ್ಲಿ ಸರಿಯಾದ ಪೀಠೋಪಕರಣ, ಗಣಕಯಂತ್ರ, ವಿಜ್ಞಾನ ಮತ್ತಿತರೆ ಉಪಕರಣಗಳು, ಆಟಿಕೆ ಸಮಾನುಗಳು, ಮೈದಾನಗಳು, ವಿ ಶಾಲ ಕಟ್ಟಡಗಳೂ ಇರುವುದಿಲ್ಲ. ಹೀಗಾಗಿ ಬಹತೇಕ ಸ್ಥಿತಿವಂತರ ಮಕ್ಕಳೇ ಇರುತ್ತಾರೆ. ಈ ಹಿನ್ನೆಲೆಯಲ್ಲಿ ಪೋಷಕರು ತಕ್ಷಣವೇ ಸರಕಾರ ನಿಗದಿತಪಡಿಸಿರುವಂತೆ ಮೊದಲ ಕಂತಿನ ಶುಲ್ಕ ಭರಿಸಬೇಕು ಎಂದು ಕೋರಿದರು.
ಸಂಘದ ಕಾರ್ಯದರ್ಶಿ ಎಸ್.ವೈ.ಚಿಕ್ಕಟ್ಟಿ, ಎಸ್.ರವಿ, ಸಿದ್ದಣ್ಣ ಬಂಗಾರಶೆಟ್ಟರ್, ಡಾ.ಪಿ.ಎಸ್. ಖೋನಾ, ಅಶೋಕ ಜೈನ್, ಶ್ರೀನಿವಾಸ ಬಾಕಳೆ, ವೆಂಕಟೇಶ ಇಮರಾಪುರ ಇತರರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here