ಶಾಸಕರಿಂದ ರೈತರ ಕಣ್ಣೀರೊರೆಸುವ ತಂತ್ರ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಹರಪನಹಳ್ಳಿ
ತಾಲೂಕಿನಲ್ಲಿನ ಅತಿವೃಷ್ಠಿ, ವಿವಿಧ ಸಮಸ್ಯೆಗಳಿಂದ ರೈತರು ತತ್ತರಿಸಿದ್ದಾರೆ. ಈ ನಡುವೆ ಶಾಸಕ ಜಿ.ಕರುಣಾಕರರೆಡ್ಡಿ ಪರಿಹಾರಕ್ಕಾಗಿ ಮುಖ್ಯಮಂತ್ರಿ ಭೇಟಿ ಮಾಡಿ, ಚರ್ಚಿಸುತ್ತೇನೆಂದು ಭರವಸೆ ನೀಡುತ್ತಾರೆಯೇ ವಿನಃ ಯಾವುದೇ ಕ್ರಮಕ್ಕೂ ಮುಂದಾಗುತ್ತಿಲ್ಲ. ಶಾಸಕರು ಕ್ಷೇತ್ರದ ರೈತರ ಕಣ್ಣೀರು ಒರೆಸುವ ತಂತ್ರ ರೂಪಿಸಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಶಶಿಧರ್ ಪೂಜಾರ್ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಇತ್ತೀಚೆಗೆ ರಾಜ್ಯದ 16 ಜಿಲ್ಲೆಗಳಲ್ಲಿನ 43 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ಘೋಷಿಸಿರುವ ಪಟ್ಟಿಯಲ್ಲಿ ಹರಪನಹಳ್ಳಿ ತಾಲೂಕನ್ನು ಕಡೆಗಣಿಸಿರುವು ತೀವ್ರ ಖಂಡನೀಯ. ಅಕಾಲಿಕ ಮಳೆಯಿಂದಾಗ ತಾಲೂಕಿನಾದ್ಯಂತ ರೈತರು ಬೆಳೆದ ಬಹುತೇಕ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಮನೆಗಳು ನೆಲಸಮಗೊಂಡಿವೆ ಎಂದರು.
ಸೈನಿಕ ಹುಳುಬಾಧೆಗೆ ಈರುಳ್ಳಿ ಬೆಳೆದ ರೈತರು ಅಕ್ಷರಶಃ ಕಣ್ಣೀರಿನಲ್ಲಿಯೇ ಕೈತೊಳೆಯುತ್ತಿದ್ದಾರೆ. ಇಂತಹ ಹಿಂದುಳಿದ ಪ್ರದೇಶವನ್ನು ಬರಪೀಡಿತ ತಾಲೂಕು ಎಂದು ಘೋಷಣೆ  ಮಾಡದಿರುವುದು ನಿಜಕ್ಕೂ ವಿಪರ್ಯಾಸ ಸಂಗತಿ ಎಂದರು.
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಸ್ಥಳೀಯ ಶಾಸಕ ಜಿ.ಕರುಣಾಕರರೆಡ್ಡಿ ಕೂಡಲೇ ಹರಪನಹಳ್ಳಿ ತಾಲೂಕನ್ನು ಪ್ರವಾಹ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಬೇಕು. ತೀವ್ರ ಸಂಕಟದಲ್ಲಿರುವ ತಾಲೂಕಿನ ರೈತರ ನೆರವಿಗೆ ಧಾವಿಸಬೇಕೆಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಶಶಿಧರ್ ಪೂಜಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here