26.1 C
Gadag
Wednesday, October 4, 2023

ಶಾಸಕ ಯತ್ನಾಳ ಗಡಿಪಾರು ಮಾಡಲು ಒತ್ತಾಯಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಕನ್ನಡ ಪರ ಸಂಘಟನೆಗಳ ಹೋರಾಟಗಾರರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜಾಪುರ ಶಾಸಕ ಬಸನಗೌಡ್ ಪಾಟೀಲ ಯತ್ನಾಳ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಬುಗಿಲೆದ್ದಿದೆ.

ಗದಗನಲ್ಲೂ ಕರವೇ ಕಾರ್ಯಕರ್ತರು ಗಡಿಪಾರು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ನೂರಾರು ಕಾರ್ಯಕರ್ತರು, ಯತ್ನಾಳ ಅವರ ಪ್ರತಿಕೃತಿ ದಹನಕ್ಕೆ ಮುಂದಾದರು. ಈ ವೇಳೆ ತಡೆಯಲು ಬಂದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಪ್ರತಿಕೃತಿ ದಹನಕ್ಕೆ ಅವಕಾಶ ನೀಡದ ಪೊಲೀಸರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಎಚ್ ಎಸ್ ಸೋಂಪೂರ, ಜಿಲ್ಲಾಧ್ಯಕ್ಷ ಹನಮಂತ ಅಬ್ಬಿಗೇರಿ, ಯುವಘಟಕದ ಜಿಲ್ಲಾಧ್ಯಕ್ಷ ನಿಂಗನಗೌಡ ಪಾಟೀಲ, ಶರಣು ಗೋಡಿ, ಬಸವರಾಜ್ ಸೇರಿದಂತೆ ಕಾರ್ಯಕರ್ತರು ಇದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!