25.7 C
Gadag
Wednesday, June 7, 2023

ಶಾಸಕ ಶರ್ಟ್ ಬಿಚ್ಚಿದ್ದು ಸರಿಯಲ್ಲ, ಸಾರ್ವಜನಿಕ ಬದುಕಿನಲ್ಲಿದ್ದವರು ಸರಿಯಾಗಿ ಇರಬೇಕು; ಹೊರಟ್ಟಿ

Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಸದನದಲ್ಲಿ ಭದ್ರಾವತಿ ಶಾಸಕ ಶರ್ಟ್ ಬಿಚ್ಚಿದ ಪ್ರಕರಣ ನನಗೆ ವೈಯಕ್ತಿಕವಾಗಿ ಬಹಳ ನೋವಾಗಿದೆ.
ಶಾಸಕರ ಸ್ಥಾನದಲ್ಲಿದ್ದವರು ಘನತೆಯಿಂದ ಇರಬೇಕು
ಸದನದ ಗೌರವ ಉಳಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿಂದು ಕೋವಿಶಿಲ್ಡ್ ವ್ಯಾಕ್ಸಿನ್ ಪಡೆದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜನಪ್ರತಿನಿಧಿಗಳಾದವರು ಕೆಲವು ವಿಷಯದಲ್ಲಿ ಸಮಾಧಾನದಿಂದ ವರ್ತಿಸಬೇಕು. ಸಭಾಪತಿ ಅಥವಾ ಸ್ಪೀಕರ್ ಗೆ ಹೋಗಿ ಮನವಿ ಮಾಡಬೇಕು. ಅದನ್ನು ಹೊರತುಪಡಿಸಿ ಈ ರೀತಿ ಮಾಡುವುದು ಸರಿ ಅನಿಸಲ್ಲ ಎಂದರು.

ಸಿಡಿ ಪ್ರಕರಣ ಹಿನ್ನೆಲೆ 6 ಸಚಿವರಿಂದ ಮತ್ತೆ ಕೋರ್ಟ್ ನಲ್ಲಿ ಸ್ಟೇ ತಂದ ಹಿನ್ನೆಲೆಯಲ್ಲಿ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಜನಪ್ರತಿನಿಧಿಗಳಾದವರು ಎಚ್ಚರಿಕೆಯಿಂದ ಇರಬೇಕು. ಪರಿಷತ್ ಕಲಾಪದಲ್ಲಿ ಮಾಧ್ಯಮವನ್ನು ಬ್ಯಾನ್ ಮಾಡಿ ಎಂದರು. ಆದರೆ ನಾನು ಮಾತ್ರ ಬ್ಯಾನ್ ಮಾಡಿಲ್ಲ. ಮಾಧ್ಯಮದವರು ಎಷ್ಟು ಜನ ಇರುತ್ತಾರೋ ನಮಗೆ ಒಳ್ಳೆಯದು ಎಂದು ಅವರು ಹೇಳಿದರು.

ಸಾರ್ವಜನಿಕ ಬದುಕಿನಲ್ಲಿದ್ದವರು ಸರಿಯಾಗಿ ಇರಬೇಕು. ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಜನರು ನೀಡಿರುವ ಕರ್ತವ್ಯವನ್ನು ನಾವು ಸರಿಯಾಗಿ ನಿಭಾಯಿಸಬೇಕು ಎಂದು ಅವರು ಸಲಹೆ ನೀಡಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts