ಶಿಕ್ಷಕರು ಆತ್ಮ ವಿಶ್ವಾಸ ಹೆಚ್ಚಿಸುವ ಕೆಲಸ ಮಾಡಿ: ಸೋಮಶೇಖರಗೌಡ

0
Spread the love

ವಿಜಯಸಾಕ್ಷಿ ಸುದ್ದಿ, ಕನಕಗಿರಿ

ಅಧಿಕಾರಿ ಹಾಗೂ ಶಿಕ್ಷಕರ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಕೆಲಸ ಮಾಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ ತಿಳಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನ ಶಿಕ್ಷಕರ ಶೈಕ್ಷಣಿಕ ಸಮಸ್ಯೆ, ಕುಂದು ಕೊರತೆಗಳಿಗೆ ಸ್ಪಂದಿಸಲಾಗುವುದು, ಶಿಕ್ಷಕರು ತಮ್ಮ ಕೆಲಸಗಳಿಗೆ ಬಿಇಓ ಕಚೇರಿಗೆ ವಿನಾಃ ಕಾರಣ ಅಲೆದಾಡದಂತೆ ಸಂಘಟನೆಗಳ ಪದಾಧಿಕಾರಿಗಳು ನೋಡಿಕೊಳ್ಳಬೇಕು ಜನರ ಕೆಂಗೆಣ್ಣಿಗೆ ಯಾವ ಶಿಕ್ಷಕರು ಗುರಿಯಾಗಬಾರದು ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ವಿ. ವಿ. ಗೊಂಡಬಾಳ ಮಾತನಾಡಿ, ಶಿಕ್ಷಕರ ಆತ್ಮ ವಿಶ್ವಾಸ ಹೆಚ್ಚಿಸುವ ಹಾಗೂ ಧನಾತ್ಮಕ ಚಿಂತನೆ ಮೂಡಿಸುವ ಕಾರ್ಯಕ್ರಮಗಳನ್ನು ಶಿಕ್ಷಕರ ಸಂಘಟನೆಗಳು ಮಾಡಬೇಕು, ಶಿಕ್ಷಕರು ವೃತ್ತಿಯಲ್ಲಿ ಬದ್ದತೆ, ಪ್ರಾಮಾಣಿಕತೆ ರೂಢಿಸಿಕೊಂಡು ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕೆಂದು ತಿಳಿಸಿದರು.

ಎನ್.ಪಿ.ಎಸ್ ಶಿಕ್ಷಕರ ಪಾನ್ ಖಾತೆಯ ವಿವರಗಳನ್ನು ಸರಿ ಪಡಿಸುವುದು, ಎಜಿಟಿ ಹಾಗೂ ಕೃಪಾಂಕದಡಿಯಲ್ಲಿ ನೇಮಕಗೊಂಡಿರುವ ಮತ್ತು 10, 15 ಮತ್ತು 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಟೈಪ್ ಬಾಂಡ್ ನ ಬಾಕಿ ವೇತನ ಪಾವತಿಸುವುದು, ಮುಖ್ಯಶಿಕ್ಷಕರ ಬಡ್ತಿ ವೇತನ, ಮುಖ್ಯಶಿಕ್ಷಕರ ಹುದ್ದೆಗೆ ಪದೋನ್ನತಿ ಪಡೆದ ಶಿಕ್ಷಕರಿಗೆ ಚಾಲನಾ ಆದೇಶ ನೀಡುವುದು ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಜತೆಗೆ ಚರ್ಚಿಸಲಾಯಿತು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಅವರನ್ನು ಬುಧವಾರ ಸನ್ಮಾನಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗಂಗಾವತಿ ಘಟಕದ ಅಧ್ಯಕ್ಷ ಚಾಂದಪಾಷ, ಕನಕಗಿರಿ ತಾಲ್ಲೂಕು ಅಧ್ಯಕ್ಷೆ ಶಂಶಾದಬೇಗ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಡಿ. ಜಿ. ಸಂಗಮ್ಮನವರ್, ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುಳಾ ಶಾವಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ರಾಮಚಂದ್ರ ಮಾಕಣ್ಣವರ್ (ಕನಕಗಿರಿ) , ರುದ್ರಗೌಡ ಪಾಟೀಲ( ಗಂಗಾವತಿ) ಖಜಾಂಚಿ ಎಚ್. ಎಸ್. ಚೇತನಕುಮಾರ, ಶಿಕ್ಷಕರಾದ ಶೇಖರಯ್ಯ ಹಿರೇಮಠ, ಉಮೇಶ, ಪರಶುರಾಮ ಇದ್ದರು.


Spread the love

LEAVE A REPLY

Please enter your comment!
Please enter your name here