ಶಿಕ್ಷಣದ ಜೊತೆಗೆ ಜೀವನ ಕೌಶಲ್ಯ ಅಳವಡಿಸಿಕೊಳ್ಳಿ:  ಯತೀಶ್ ಎನ್

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಪ್ರತಿಯೊಬ್ಬರ ಜೀವನದಲ್ಲೂ ಮುಂದೆ ಒಂದು ಗುರಿ, ಹಿಂದೆ ಒಬ್ಬ ಗುರು ಇರಬೇಕು. ಅಂದಾಗ ಯಶಸ್ಸು ಸಾಧಿಸಬಹುದು. ಶಿಕ್ಷಣದ ಜೊತೆಗೆ ಜೀವನ ಕೌಶಲ್ಯಗಳನ್ನು ಬದುಕಿನುದ್ದಕ್ಕೂ ಅಳವಡಿಕೊಳ್ಳಬೇಕು. ಅಲ್ಲದೇ, ತರಬೇತಿಯ ಸದುಪಯೋಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಸ್ಪಿ ಯತೀಶ್ ಎನ್ ಹೇಳಿದರು.
ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಛೇರಿ ಗದಗ ಇವರ ಸಹಯೋಗದಲ್ಲಿ ಗದಗ-ಬೆಟಗೇರಿಯ ಅನನ್ಯ ನಗರ ಹಗೂ ಗ್ರಾಮೀಣಾಭಿವೃದ್ಧಿ ವಿವಿದೋದ್ದೇಶಗಳ ಸಂಸ್ಥೆಯಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಮಾತನಾಡಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲೂರ ಬಸವರಾಜ ಮಾತನಾಡಿ, ಉತ್ತಮ ತರಬೇತಿ ಪಡೆದುಕೊಳ್ಳುವ ಮೂಲಕ ಸ್ವಯಂ ಉದ್ಯೋಗ ಮಾಡಬೇಕು ಎಂದ ಅವರು ಕೌಶಲ್ಯಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಸಿಡಾಕ್ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಅಂಗಡಿ ಮಾತನಾಡಿ, ನೂತನ ಉದ್ಯಮಗಳ ಆಯ್ಕೆ ಮಾಡಿಕೊಳ್ಳಬೇಕು. ಉದ್ಯಮಿಗಳಾಗಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು ಎಂದರು.
ಉದ್ಯಮಿದಾರ ರಮೇಶ ಹತ್ತಿಕಾಳ, ಜಿಲ್ಲಾ ಖಾದಿ ಗ್ರಾಮೋದ್ಯೊಗ ಅಧಿಕಾರಿ ಎಸ್.ಎಮ್. ಹಂಚಿನಮನಿ ಸೇರಿದಂತೆ ಇತರರು ಇದ್ದರು. ಮಂಜುನಾಥ ಮುಳಗುಂದ ಕಾರ್ಯಕ್ರಮ ವಂದಿಸಿದರು. ದ ವಂದನಾರ್ಪಣೆಯನ್ನು ಕು. ವಿಜಯಲಕ್ಷ್ಮಿ ನೆಲ್ಲೂರ ವಂದಿಸಿದರು.


Spread the love

LEAVE A REPLY

Please enter your comment!
Please enter your name here