25.8 C
Gadag
Friday, June 9, 2023

ಶಿಕ್ಷಣ ಸಚಿವ ಸುರೇಶ್ ಕುಮಾರ ಮಲತಾಯಿ ಧೋರಣೆ ಖಂಡಿಸಿ ಗುರುವಾರ ಪ್ರತಿಭಟನೆ

Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಕೊರೋನಾ ಸೋಂಕಿನಿಂದ ಸಾಕಷ್ಟು ಆರ್ಥಿಕ ಸಂಕಷ್ಟ ಹೊರತಾಗಿ ಶಾಲೆಗಳು ಓಪನ್ ಇಲ್ಲದೆ ಮಕ್ಕಳಿಗೆ ಮಾನಸಿಕ ಹಾಗೂ ಶೈಕ್ಷಣಿಕ ಸಮಸ್ಯೆಗಳು ಎದುರಾಗಿವೆ. ಆದ್ರೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೊಂದಲಮಯ ಹೇಳಿಕೆಯನ್ನು ನೀಡುವ ಮುಲಕ ಮಲತಾಯಿ ಧೋರಣೆಯನ್ನು ತೋರಿದ್ದಾರೆ ಎಂದು ಕೊಪ್ಪಳ ಜಿಲ್ಲೆಯ ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷ ರಾಘವೇಂದ್ರ ಪಾನಘಂಟಿ ಮಾತನಾಡಿ, ಖಾಸಗಿ ಶಾಲೆಗಳ ಬಗ್ಗೆ ಸರ್ಕಾರಕ್ಕೆ ಚಿಂತನೆ ಇಲ್ಲ. ಅವರ ಸಮಸ್ಯೆಗಳಿ ಪರಿಹಾರವಾಗಲಿ ಅಥವಾ ನೆರವಿಗೆ ಬಾರದೇ ಇರುವುದು ಶೋಚನೀಯ, ಹಾಗಾಗಿ ಡಿಸೆಂಬರ್ 11 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ವಿವಿಧ ಬೇಡಿಕೆಗೆ ಒತ್ತಾಯಿಸಲಿದ್ದೇವೆ ಎಂದರು.

ಶಾಲಾ ನವೀಕರಣವನ್ನು ನಿರ್ಬಂಧವಿಲ್ಲದೆ ಮುಂದಿನ ಐದು ವರ್ಷಗಳಿಗೆ ವಿಸ್ತರಣೆ ಮಾಡುವುದು, ಕಟ್ಟಡ ಹಾಗೂ ವಾಹನಗಳ ಸಾಲ ಮರುಪಾವತಿಗೆ ಒಂದು ವರ್ಷ ವಿನಾಯಿತ ನೀಡುವುದು, ಖಾಸಗಿ ಶಿಕ್ಷಕರಿಗೆ ಸಿಬ್ಬಂದಿಗೆ 10000 ರೂ ಸಂಕಷ್ಟ ಪರಿಹಾರ, ಆರ್ ಟಿ ಇ ಶುಲ್ಕ ಮರುಪಾವತಿ, 25 ವರ್ಷಗಳಿಂದ ನಡೆಯುತ್ತಿರುವ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ಕಲ್ಯಾಣ ಕರ್ನಾಟಕಕ್ಕೆ ಒಳಪಡುವ ಎಲ್ಲಾ ಶಾಲೆಗಳಿಗೆ 371 ಜೆ ಅಡಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ರಾಜ್ಯದಲ್ಲಿ ಅಧಿಕೃತ ಶಾಲೆ ಆರಂಭವಾಗುವವರೆಗೆ ಸಾಲದ ಕಂತುಗಳು, ವಾಹನ ತೆರೆಗೆ, ಇನ್ಷುರೆನ್ಸ್ ಪಾವತಿಗೆ ವಿನಾಯಿತಿ ಇನ್ನಿತರ ಹಲವು ಬೇಡಿಕೆಗಳ ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಲಾಗುವುದು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಖಾಸಗಿ ಶಾಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ಪ್ರಹ್ಲಾದ್ ಅಗಳಿ, ತಾಲೂಕ ಅಧ್ಯಕ್ಷ ಶಾಹೀದ್ ತಹಶೀಲ್ದಾರ್, ನಿರ್ದೇಶಕ ಎ ಹೆಚ್ ಆತನೂರು, ದಾನಪ್ಪ ಕವಲೂರು ಸೇರಿದಂತೆ ಇನ್ನಿತರರು ಇದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts