ಶಿಸ್ತುಬದ್ಧ ಪಕ್ಷ ಸಂಘಟನೆ ನೊಡಿ ಖುಷಿಯಾಗಿದೆ: ಬಿ.ಸಿ.ಪಾಟೀಲ್

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಬಿಜೆಪಿಯಲ್ಲಿರುವ ಶಿಸ್ತು ಬದ್ಧವಾದ ಪಕ್ಷ ಸಂಘಟನೆಯನ್ನು ನಾನು ಯಾವ ಪಕ್ಷದಲ್ಲೂ ನೋಡಿಲ್ಲ. ಇಲ್ಲಿ ನೋಡಿದ್ದು ತುಂಬಾ ಖುಷಿಯಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ಪಟ್ಟರು.

ಪ್ರವಾಸಿಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಾನು ಹೊಸದಾಗಿ ಸೇರ್ಪಡೆಯಾಗಿದ್ದು, ಇಲ್ಲಿನ ಶಿಸ್ತು ಬದ್ಧ ಪಕ್ಷ ಸಂಘಟನೆ, ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ ನೋಡಿ ಬಹಳಷ್ಟು ಖುಷಿಯಾಗಿದೆ ಎಂದರು.

ಗ್ರಾಮ ಸ್ವರಾಜ್ ಯಾತ್ರೆ ಮೂಲಕ ಮುಂಬರುವ ಗ್ರಾಮ ಪಂಚಾಯತ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸನ್ನದ್ಧಗೊಳಿಸಲಾಗುತ್ತಿದೆ. ಕಾರ್ಯಕರ್ತರನ್ನು ಬಲ ಪಡಿಸಲಾಗುತ್ತಿದೆ. ಅಲ್ಲದೇ, ತಳಮಟ್ಟದಲ್ಲಿರುವ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲಾಗುತ್ತಿದೆ. ಚುನಾವಣೆ ಎದುರಿಸಲು ಕಾರ್ಯಕರ್ತರಲ್ಲಿ ಶಕ್ತಿ ತುಂಬಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಈ ಸಂದರ್ಭದಲ್ಲಿ
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿ.ಸಿ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ.ಸಂಕನೂರ, ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಜೇಂದ್ರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಮೋಹನ್ ಮಾಳಶೆಟ್ಟಿ, ಯುವ ಮುಖಂಡ ಅನಿಲ್ ಮೆಣಸಿನಕಾಯಿ ಸೇರಿದಂತೆ ಹಲವರು ಇದ್ದರು.


Spread the love

LEAVE A REPLY

Please enter your comment!
Please enter your name here