ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ: ಶಾಸಕ ಯತ್ನಾಳ್

0
Spread the love

ವಿಜಯಸಾಕ್ಷಿ ಸುದ್ದಿ, ವಿಜಯಪುರ

ಮಕರ ಸಂಕ್ರಾಂತಿಗೆ ರಾಜ್ಯದಲ್ಲಿ ಐತಿಹಾಸಿಕ ಬದಲಾವಣೆಗಳಾಗಲಿದ್ದು, ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಶಯ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಆಗುತ್ತದೆಯೋ ಪುನರ್ ರಚನೆಯಾಗುತ್ತೋ ಖಚಿತ ಮಾಹಿತಿ ಇಲ್ಲಾ. ಎಲ್ಲವೂ ಗೋಡಾರ್ಥವಿದೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ, ನಾನದರಲ್ಲಿಲ್ಲ್ಲ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲೂ ಮನಸ್ಸಿಲ್ಲ. ಹಣೆಬರಹ ಯಾರದ್ದೂ ಯಾರಿಗೂ ಗೊತ್ತಿಲ್ಲ, ಹಣೆಬರಹದಲ್ಲಿದ್ದರೆ ಸಿಎಂ ಆಗಬಹುದು. ಆಗಬಾರದು ಅಂತೆಲ್ಲಿದೆ? ಎಂದು ಹೇಳುವ ಮೂಲಕ ಸಿಎಂ ಆಗಬೇಕೆಂಬ ಕನಸನ್ನು ಯತ್ನಾಳ್ ಪರೋಕ್ಷವಾಗಿ ಬಿಚ್ಚಿಟ್ಟರು.

ಕೇಂದ್ರ ಹೈಕಮಾಂಡ್ ನೂರಕ್ಕೆ ನೂರರಷ್ಟು ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ. ವಿಜಯಪುರ ಜಿಲ್ಲೆಗೆ ಇಷ್ಟುದಿನ ಆದ ಅನ್ಯಾಯಕ್ಕೆ ನ್ಯಾಯ ಕೊಡುವ ಕೆಲಸ ಕೇಂದ್ರ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಶಾಲೆ ಆರಂಭದಲ್ಲಿ ಅವಸರ ಬೇಡ

ಮಕ್ಕಳ ಆರೋಗ್ಯ ಹಾಗೂ ಭವಿಷ್ಯ ಮುಖ್ಯ. ನಾನು ಶಿಕ್ಷಣ ಸಂಸ್ಥೆಯ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಒಂದು ವರ್ಷ ಶಿಕ್ಷಣ ಸಂಸ್ಥೆಗಳಿಗೆ ಹಾನಿಯಾದರೂ ನಾವು ಸಹಿಸಿಕೊಳ್ಳಬಹುದು. ಆದರೆ, ಮಕ್ಕಳ ಮೇಲೆ ಯಾವುದೇ ದುಷ್ಪರಿಣಾಮ ಆಗಬಾರದು. ಹಿಂದಿನಂತೆ ಈಗ ನಾಲ್ಕೈದು ಮಕ್ಕಳ ಬದಲು, ಒಂದೆರಡು ಮಕ್ಕಳಿದ್ದು, ಪಾಲಕರು ಜೋಪಾನದಿಂದ ಬೆಳೆಸಿರುತ್ತಾರೆ. ಹಾಗಾಗಿ ಶಾಲೆ ಆರಂಭದಲ್ಲಿ ಅವಸರ ಮಾಡುವ ಅವಶ್ಯಕತೆ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ

ಸಿಎಂ ಯಡಿಯೂರಪ್ಪ ಕರ್ಫ್ಯೂ ವಾಪಸ್ ತೆಗೆದುಕೊಂಡಿದ್ದು ಸ್ವಾಗತಾರ್ಹ. ಯಾರೋ ಒಬ್ಬರ ಮಾತು ಕೇಳಿ ತೀರ್ಮಾನ ತೆಗೆದುಕೊಳ್ಳುವ ಬದಲು, ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಯತ್ನಾಳ ಒತ್ತಾಯಿಸಿದರು.


Spread the love

LEAVE A REPLY

Please enter your comment!
Please enter your name here