21.4 C
Gadag
Wednesday, September 27, 2023

ಸಂಗಯ್ಯಸ್ವಾಮಿಯನ್ನು ನಗರಸಭೆ ನಾಮನಿರ್ದೇಶಿತ ಸದಸ್ಯನಾಗಿ ನೇಮಿಸಿ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಬಿಜೆಪಿಯ ನಿಷ್ಠಾವಂತ ಮುಖಂಡ ಸಂಗಯ್ಯಸ್ವಾಮಿ ಸಂಶೀಮಠ ಅವರಿಗೆ ಗಂಗಾವತಿ ನಗರಸಭೆಯ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸುವಂತೆ ಒತ್ತಾಯಿಸಿ ವೀರಶೈವ ಲಿಂಗಾಯತ ಯುವ ವೇದಿಕೆಯ ಪದಾಧಿಕಾರಿಗಳು ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಮನವಿ ಸಲ್ಲಿಸಿದರು.
ನಗರದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಶರಣಯ್ಯಸ್ವಾಮಿ ಮರಳಿಮಠ ನೇತೃತ್ವದಲ್ಲಿ ಶಾಸಕರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಇದೇ ವೇಳೆ ಶರಣಯ್ಯಸ್ವಾಮಿ ಮರಳಿಮಠ ಮಾತನಾಡಿ, ಸಂಗಯ್ಯಸ್ವಾಮಿ ಅವರು ಸುಮಾರು ೨೦ ವರ್ಷಗಳಿಂದಲೂ ಭಾರತೀಯ ಜನತಾ ಪಾರ್ಟಿಯಲ್ಲಿ ಹಗಲಿರುಳು ಶ್ರಮಿಸುತ್ತಾ ಬಂದಿದ್ದಾರೆ. ಅಲ್ಲದೇ ಹಿಂದೆಯೂ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿ ಪಕ್ಷವನ್ನು ಕಟ್ಟಿದ್ದಾರೆ. ಅಲ್ಲದೆ, ಎರಡು ಬಾರಿ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡೂ ಬಾರಿಯ ಸೋತರೂ ಎದೆಗುಂದದೆ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿದ್ದಾರೆ ಎಂದರು.
ಸಂಗಯ್ಯಸ್ವಾಮಿ ಸದ್ಯ ವೀರಶೈವ ಲಿಂಗಾಯತ ಯುವ ವೇದಿಕೆಯ ನಗರ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ನಾಮನಿರ್ದೇಶನ ಮಾಡುವುದರ ಜೊತೆಗೆ ಜಂಗಮ ಸಮಾಜಕ್ಕೆ ಸ್ಥಾನಮಾನ ನೀಡಬೇಕೆಂದು ಅವರು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವಲಿಂಗಯ್ಯಸ್ವಾಮಿ ಹಿರೇಮಠ, ತಾಲೂಕು ಅಧ್ಯಕ್ಷ ಡಾ.ಮಹೇಶ ಹೊಸಮನಿ, ವೀರಶೈವ ಲಿಂಗಾಯತ ಯುವ ವೇದಿಕೆ ಮುಖಂಡರಾದ ವೀರಭದ್ರಯ್ಯ ಮೈಲಾಪೂರು ಹಿರೇಮಠ, ವಿ.ಜಿ.ಹಿರೇಮಠ, ವೀರಯ್ಯಸ್ವಾಮಿ ಸಂಶಿಮಠ, ಸೋಮನಾಥ ಸೇರಿದಂತೆ ಇತರರು ಇದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!