25.8 C
Gadag
Saturday, June 10, 2023

ಸಂಚು ಮಾಡಿ ಅಂಬೇಡ್ಕರ್ ಅವರನ್ನೇ ಸೋಲಿಸಲಿಲ್ಲವೇ?; ಕಾಂಗ್ರೆಸ್ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ

Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ರಾಜಕೀಯವೇ ಒಂದು ಸಂಚು.
ಸಂಚನ್ನು ಒಬ್ಬರೇ ಮಾಡಲ್ಲ.
ಸಂವಿಧಾನ ರಚಿಸಿದ ಅಂಬೇಡ್ಕರ್‌ರನ್ನೇ ಸೋಲಿಸಲಿಲ್ಲವೇ ? ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಚಾಮುಂಡೇಶ್ವರಿ ಸೋಲಿಗೆ ಬಿಜೆಪಿ- ಜೆಡಿಎಸ್ ಸಂಚು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,
ಪ್ರಧಾನಿಯಾಗಿದ್ದ ದೇವೇಗೌಡರನ್ನು ತುಮಕೂರಿನಲ್ಲಿ ಸಂಚು ಮಾಡಿ ಸೋಲಿಸಲಿಲ್ಲವೇ?
ಮಂಡ್ಯದಲ್ಲಿ ನಿಖಿಲ್ ವಿರುದ್ಧ ಸಂಚು ಆಗಲಿಲ್ಲವೇ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ರಾಜಕಾರಣದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಅಂತಹ ಮನಸ್ಥಿತಿ ಸಿದ್ದರಾಮಯ್ಯಗೆ ಇದೆ. ಆದರೆ, ಅದನ್ನು ಅವರು ಅರ್ಥ ಮಾಡಿಕೊಂಡು ಸ್ವೀಕರಿಸಲಿ ಎಂದು ಸಾ.ರಾ.ಮಹೇಶ್ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಿವಿಮಾತು ಹೇಳಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts