ಸಂಪುಟ ವಿಸ್ತರಣೆ ವಿಳಂಬ: ಒಂದೇ ವಾಕ್ಯದಲ್ಲಿ ಉತ್ತರಿಸಿದ ಯಡಿಯೂರಪ್ಪ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸಂಪುಟ ವಿಸ್ತರಣೆಗೆ ನಾವು ನೀವು ಇಬ್ಬರೂ ಕಾಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಿಂದ ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರು ಮಾಧ್ಯಮದವರ ಅಮಿತ್ ಶಾ ಅವರು ಭರವಸೆ ಕೊಟ್ಟ ಬಳಿಕವೂ ಸಂಪುಟ ವಿಳಂಬವಾಗುತ್ತಿದೆಯಲ್ಲ ಎಂಬ ಪ್ರಶ್ನೆಗೆ ಒಂದೇ ವಾಕ್ಯದಲ್ಲಿ ಮಾಧ್ಯಮಗಳಿಗೆ ಉತ್ತರಿಸಿ ತೆರಳಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಇನ್ನೂ ಗೊಂದಲದ ಗೂಡಾಗಿದೆ. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಪಟ್ಟಿ ಕಳುಹಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಮೊನ್ನೆಯಷ್ಟೇ ಹೇಳಿದ್ದರು.

ಅವರು ಹೇಳಿ ಮೂರು ದಿನಗಳು ಕಳೆದಿದ್ದರೂ, ಹೈಕಮಾಂಡ್ ನಿಂದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಯಡಿಯೂರಪ್ಪ ಅವರಿಗೆ ಇನ್ನೂವರೆಗೂ ಯಾವುದೇ ಸೂಚನೆಗಳು ಬಂದಿಲ್ಲ.

ಶಿರಾ ಮತ್ತು ರಾಜರಾಜೇಶ್ವರ ನಗರ ಉಪ ಚುನಾವಣೆಯ ಗೆಲವಿನ ನಂತರವೂ ಬಳಿಕವೂ ಬಿಎಸ್ವೈಗೆ ಪೂರಕವಾದ ವಾತಾವರಣ ಸೃಷ್ಠಿಯಾಗುತ್ತಿಲ್ಲ.

ಸಂಪುಟ ವಿಸ್ತರಣೆಗೆ ವರಿಷ್ಠರು ಒಪ್ಪಿಗೆ ನೀಡದಿರುವುದು ನಿಗೂಢತೆಗೆ ಕಾರಣವಾಗಿರುವುದೆ. ರಾಜಕೀಯ ಕಾರ್ಯದರ್ಶಿ ಹಾಗೂ ಯಡಿಯೂರಪ್ಪ ಅವರ ಹತ್ತಿರದ ಸಂಬಂಧಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವುದು ಸಿಎಂ ನೆಮ್ಮದಿ ಕೆಡಿಸಿವೆ ಎಂದು ಹೇಳಲಾಗಿದ್ದು, ಹೈಕಮಾಂಡ್ ನ ಸಚಿವ ಸಂಪುಟದ ವಿಳಂಬ ಧೋರಣೆ ಬಿಜೆಪಿಯಲ್ಲಿ ಸಹಜವಾಗಿ ಗೊಂದಲ ಸೃಷ್ಟಿಸಿದೆ.


Spread the love

LEAVE A REPLY

Please enter your comment!
Please enter your name here