ಸಚಿವ ಸಿ.ಸಿ. ಪಾಟೀಲ ಜನ್ಮ ದಿನಾಚರಣೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗಣಿ, ಭೂವಿಜ್ಞಾನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅವರ ಜನ್ಮದಿನವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಿದರು.
ಸಿ.ಸಿ. ಪಾಟೀಲ ಅವರ 62ನೇ ಜನ್ಮದಿನಾಚರಣೆಯನ್ನು ಅವಳಿ ನಗರದ ೩೫ ವಾರ್ಡಗಳಲ್ಲಿನ ಒಟ್ಟು 62 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಸಿಹಿ ವಿತರಣೆ ಮಾಡುವ ಮೂಲಕ ಆಚರಿಸಲಾಯಿತು.
ನಗರದ ವೀರೇಶ್ವರ ಪುಣ್ಯಾಶ್ರಮ, ಮಾಬುಸುಬಾನಿ ದರ್ಗಾದಲ್ಲಿಯೂ ವಿಶೇಷ ಪೂಜೆ, ದುವಾ ಮಾಡಲಾಯಿತು. ಅನೇಕ ಗಣ್ಯರು ಭಾಗಿಯಾಗಿ ಸಿ.ಸಿ. ಪಾಟೀಲ ಅವರಿಗೆ ಶುಭ ಹಾರೈಸಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ ವೀರೇಶ್ವರ ಪುಣ್ಯಾಶ್ರಮದ ಅಂಧ, ಅನಾಥ ಮಕ್ಕಳಿಗೆ ಸಿಹಿ ವಿತರಣೆ ಕಾರ್ಯಕ್ರಮವೂ ನಡೆಯಿತು.

ಪುಣ್ಯಾಶ್ರಮದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಬಿಜೆಪಿ ಯುವ ಮುಖಂಡ ಅನಿಲ ಮೆಣಸಿನಕಾಯಿ, ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ನಾಯಕ ಸಿ.ಸಿ. ಪಾಟೀಲ, ಜಿಲ್ಲೆಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಉಂಟಾದ ನೆರೆ, ಬರ ಮತ್ತು ಕೊರೊನಾ ಸಂಕಷ್ಟದಲ್ಲೂ ಅವಿರತವಾಗಿ ಶ್ರಮಿಸಿ ಜನಮೆಚ್ಚುಗೆಗೆ ಕಾರಣರಾಗಿದ್ದಾರೆ. ದೇವರು ಸಿ.ಸಿ.ಪಾಟೀಲ ಅವರಿಗೆ ಉತ್ತಮ ಆರೋಗ್ಯ, ಸುಖ-ಶಾಂತಿ, ನೆಮ್ಮದಿ ಜೊತೆಗೆ ಇನ್ನಷ್ಟು ಜನಸೇವೆ ಮಾಡುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ, ಪ್ರಮುಖರಾದ ಲಿಂಗರಾಜ ಪಾಟೀಲ, ಎಂ.ಎಸ್.ಕರೀಗೌಡ್ರ, ಮಾಂತೇಶ ನಾಲ್ವಾಡ, ರವಿ ದಂಡಿನ, ಪ್ರಶಾಂತ ನಾಯ್ಕರ, ಅನಿಲ ಅಬ್ಬಿಗೇರಿ, ಸಿರಾಜ ಬಳ್ಳಾರಿ, ಶಿವಲಿಂಗ ಶಾಸ್ತ್ರಿ, ಬಸವಣ್ಣೆಯ್ಯ ಹಿರೇಮಠ, ರಾಘವೇಂದ್ರ ಯಳವತ್ತಿ, ಇರ್ಷಾದ ಮಾನ್ವಿ, ಕಿಷನ್ ಮೆರವಾಡೆ, ರೇಖಾ ಅಳವಂಡಿ, ಅಶ್ವಿನಿ ಜಗತಾಪ, ಶಾರದಾ ಹಿರೇಮಠ, ನಿಂಗಪ್ಪ ಮಣ್ಣೂರ, ಗಂಗಾಧರ ಹಬೀಬ, ರಾಚಯ್ಯ ಹೊಸಮಠ, ಮಂಜು ಪಾಟೀಲ, ಶಿವು ಹಿರೇಮನಿಪಾಟೀಲ, ಪುಟ್ಟು ಹಿರೇಮಠ, ರಾಹುಲ ಅರಳಿ, ಬುಡ್ಡಾಸಾಬ ಆಲೂರ, ಬಾಬು ಯಲಿಗಾರ, ಶರಣಪ್ಪ ಕಮಡೊಳ್ಳಿ, ಅರವಿಂದ ಕೇಲೂರ, ಮೋಹನ ಮಾಳಗಿಮನಿ, ಅಮರನಾಥ ಗಡಗಿ, ಪ್ರಕಾಶ ಅಂಗಡಿ, ಸಾಕ ಮನಿಯಾರ, ನಾಸಿರ ನೆರೆಗಲ್, ಶ್ಯಾಮಿದ್ ನರಗುಂದ ಹಾಗೂ ೩೫ ವಾರ್ಡಿನ ಎಲ್ಲ ಪ್ರಮುಖರುಗಳು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here