ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಯಿತು.
ಆರೋಗ್ಯ, ಶಿಕ್ಷಣ ಇಲಾಖೆಗಳ ಪ್ರಗತಿಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿದ್ದವು. ಆದರೆ, ಈ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ, ಬಹುತೇಕ ಇನ್ನುಳಿದ ಇಲಾಖೆಯ ಅಧಿಕಾರಿಗಳು ಸಭೆಗೂ ನಮಗೂ ಸಂಬಂಧವಿಲ್ಲವೆಂಬಂತೆ ಮೊಬೈಲ್ ನಲ್ಲಿ ತಲ್ಲೀನರಾಗಿದ್ದರು.
![](http://vijayasakshi.com/wp-content/uploads/2021/02/img_20210212_1514384133224786437144764.jpg)
ವಿಷಯದ ಗಂಭೀರತೆ ಅರಿಯದ ಅಧಿಕಾರಿಗಳು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು. ಅವರದೊಂದಿಗೆ ಕೆಲ ಜಿಲ್ಲಾ ಪಂಚಾಯತಿ ಸದಸ್ಯರೂ ಸಹಿತ ಮೊಬೈಲ್ ನಲ್ಲಿ ಮಗ್ನರಾಗಿದ್ದು, ಸಭೆಯ ಉದ್ದೇಶಕ್ಕೆ ತಣ್ಣೀರು ಎರಚಿದರು.
![](http://vijayasakshi.com/wp-content/uploads/2021/02/img_20210212_1514152866822763832966728.jpg)
ಇನ್ನು ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಚರ್ಚಿಸಬೇಕಾಗಿದ್ದ, ಎಸಿ ಹಾಲ್ ನಲ್ಲಿ ಕೂತಿದ್ದ ಅಧಿಕಾರಿ ಮಹೋದಯರು ನಿದ್ದೆಗೆ ಜಾರುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿದರು.
![](http://vijayasakshi.com/wp-content/uploads/2021/02/img_20210212_1513594487651918632579819.jpg)
ಜನರ ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು ಹೀಗೆ ಮೊಬೈಲ್ ನೋಡುತ್ತಾ, ನಿದ್ದೆ ಮಾಡುತ್ತಾ ಇದ್ದರೆ, ಜನರ ಸಮಸ್ಯೆ ಹೇಗೆ ಬಗೆಹರಿಸುತ್ತಾರೆ ಅಂತ ಜನಸಾಮಾನ್ಯರು ಪ್ರಶ್ನೆ ಮಾಡುತ್ತಿದ್ದಾರೆ.