25.8 C
Gadag
Friday, June 9, 2023

ಸಭೆ ನಡೆಯುವಾಗ ಮೊಬೈಲ್ ಹಾಗೂ ನಿದ್ದೆಯಲ್ಲಿ ಬ್ಯುಸಿಯಾದ ಅಧಿಕಾರಿಗಳು

Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಯಿತು.

ಆರೋಗ್ಯ, ಶಿಕ್ಷಣ ಇಲಾಖೆಗಳ ಪ್ರಗತಿಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿದ್ದವು. ಆದರೆ, ಈ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ, ಬಹುತೇಕ ಇನ್ನುಳಿದ ಇಲಾಖೆಯ ಅಧಿಕಾರಿಗಳು ಸಭೆಗೂ ನಮಗೂ ಸಂಬಂಧವಿಲ್ಲವೆಂಬಂತೆ ಮೊಬೈಲ್ ನಲ್ಲಿ ತಲ್ಲೀನರಾಗಿದ್ದರು.

ವಿಷಯದ ಗಂಭೀರತೆ ಅರಿಯದ ಅಧಿಕಾರಿಗಳು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು. ಅವರದೊಂದಿಗೆ ಕೆಲ ಜಿಲ್ಲಾ ಪಂಚಾಯತಿ ಸದಸ್ಯರೂ ಸಹಿತ ಮೊಬೈಲ್ ನಲ್ಲಿ ಮಗ್ನರಾಗಿದ್ದು, ಸಭೆಯ ಉದ್ದೇಶಕ್ಕೆ ತಣ್ಣೀರು ಎರಚಿದರು.

ಇನ್ನು ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಚರ್ಚಿಸಬೇಕಾಗಿದ್ದ, ಎಸಿ ಹಾಲ್ ನಲ್ಲಿ ಕೂತಿದ್ದ ಅಧಿಕಾರಿ ಮಹೋದಯರು ನಿದ್ದೆಗೆ ಜಾರುವ ಮೂಲಕ ಬೇಜವಾಬ್ದಾರಿತನದಿಂದ ವರ್ತಿಸಿದರು.

ಜನರ ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು ಹೀಗೆ ಮೊಬೈಲ್ ನೋಡುತ್ತಾ, ನಿದ್ದೆ ಮಾಡುತ್ತಾ ಇದ್ದರೆ, ಜನರ ಸಮಸ್ಯೆ ಹೇಗೆ ಬಗೆಹರಿಸುತ್ತಾರೆ ಅಂತ ಜನಸಾಮಾನ್ಯರು ಪ್ರಶ್ನೆ ಮಾಡುತ್ತಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts