ಸರಳವಾಗಿ ರಾಜ್ಯೋತ್ಸವ ಆಚರಣೆ: ಗೌಸಿಯಾಬೇಗಂ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕಂಪ್ಲಿ
ಕೊರೊನಾ ವೈರಸ್ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ನ.೧ರಂದು ಆಚರಣೆ ಮಾಡಲಿರುವ ಕರ್ನಾಟಕ ರಾಜ್ಯೋತ್ಸವವನ್ನು ತಾಲೂಕು ಆಡಳಿತದಿಂದ ಅತ್ಯಂತ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಹಸೀಲ್ದಾರ್ ಗೌಸಿಯಾಬೇಗಂ ತಿಳಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಜ್ಯೋತ್ಸವ ಮತ್ತು ಹಬ್ಬಗಳ ಆಚರಣೆಗೆ ಸರ್ಕಾರದಿಂದ ನಿಯಮಗಳನ್ನು ಜಾರಿಗೊಳಿಸಿದ್ದು, ಸರ್ಕಾರದ ಆದೇಶದಂತೆ ಅತ್ಯಂತ ಸರಳವಾಗಿ ಆಚರಿಸಲಾಗುವುದು ತಿಳಿಸಿದರು.
ಕರ್ನಾಟಕ ರಾಜ್ಯೋತ್ಸವವನ್ನು ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣದೊಂದಿಗೆ ಆಚರಣೆ ಮಾಡಲಾಗುವುದು. ಅಂದು ತಾಲೂಕಿನ ರಾಮಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಪ್ರಥಮ ಬಾರಿಗೆ ನೂರಕ್ಕೆ ನೂರು ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯಗುರುಗಳನ್ನು ಹಾಗೂ ಅಧಿಕ ಅಂಕ ಪಡೆದ ಶಾಲೆಯ ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಅಧಿಕಾರಿಗಳ ಗೈರು: ತಾಲೂಕು ಆಡಳಿತ ಹಬ್ಬಗಳ ಆಚರಣೆ, ಜಯಂತಿಗಳಿಗೆ ಕರೆಯುವ ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಿ ಹಾಗೂ ತಮ್ಮ ಪ್ರತಿನಿಧಿಗಳನ್ನು ಕಳುಹಿಸುತ್ತಿರುವ ಬಗ್ಗೆ ಗರಂ ಆದ ತಹಸೀಲ್ದಾರ್ ಗೌಸಿಯಾಬೇಗಂ, ಕಳೆದ ಹಲವಾರು ಸಭೆಗಳಲ್ಲಿ ಈ ಬಗ್ಗೆ ಚರ್ಚೆ ನಡೆಸಿದರೂ ಸಹಿತ ಬಹುತೇಕ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಿಯಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕನ್ನಡ ಜಾಗೃತಿ ಸಮತಿ ಸದಸ್ಯರಾದ ಜಿ. ಚಂದ್ರಶೇಖರಗೌಡ, ಎಸಿ. ದಾನಪ್ಪ, ಸಿಆರ್. ಹನುಮಂತಪ್ಪ, ಶಿರಸ್ತೇದಾರ ಎಸ್. ರೇಖಾಮಠ, ಮಾಲತೇಶ ದೇಶಪಾಂಡೆ, ಪಟ್ಟಣದ ಮುಖಂಡರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here