28.3 C
Gadag
Sunday, December 3, 2023

ಸರಿಯಾದ ಸಮಯಕ್ಕೆ ಬಾರದ ಬಸ್ಸುಗಳು. ಕಾಲೇಜು ವಿದ್ಯಾರ್ಥಿಗಳ ಪರದಾಟ. ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನೂರಾರು ವಿದ್ಯಾರ್ಥಿಗಳು

Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಗ್ರಾಮಾಂತರ ಭಾಗದ ಕಾಲೇಜ್ ವಿದ್ಯಾರ್ಥಿಗಳು ಬಸ್ಸುಗಳಿಲ್ಲದೇ ಪರದಾಟ ನಡೆಸುತ್ತಿತುವುದು ಕೊಪ್ಪಳ ಜಿಲ್ಲೆಯಲ್ಲಿ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಏಕಾಏಕಿ ರಾಜ್ಯಹೆದ್ದಾರಿ ಬಂದ್ ಮಾಡಿ ಬಸ್ಸಗಳನ್ನು ತಡೆದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ನಡೆದಿದೆ.
ಯಲಬುರ್ಗಾ ತಾಲೂಕಿನ ಕುದರಮೋತಿ ಗ್ರಾಮದಲ್ಲಿ ಬಸ್ಸುಗಳು ನಿಲ್ಲಿಸದೆ ಹೋಗುತ್ತಿದ್ದು, ಇದರಿಂದ ಕಾಲೇಜುಗಳಿಗೆ ಹೋಗಲು ಸಮಸ್ಯೆಯಾಗುತ್ತಿತ್ತು. ಇದರಿಂದ ರೊಚ್ಚಿಗೆದ್ದ ನೂರಾರು ಕಾಲೇಜ್ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ, ಹತ್ತಾರು ಬಸ್ಸುಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು.
ಇನ್ನು ಈ ಬಗ್ಗೆ ಜಿಲ್ಲೆಯ KSRTC ವಿಭಾಗದ ಡಿಪೋ ಮ್ಯಾನೇಜರ್ ಗಳಲ್ಲಿ ಎಸ್ಎಫ್ಐ ಸಂಘಟನೆಯು ಮನವಿ ಮಾಡಿಕೊಂಡಿದ್ದು, ಜಿಲ್ಲೆಯಾದ್ಯಂತ ಕಾಲೇಜು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಗ್ರಾಮಗಳಿಂದ ನಗರಕ್ಕೆ ಬಸ್ಸ್ ಗಳನ್ನು ಬಿಡಬೇಕು ಇಲ್ಲದಿದ್ದಲ್ಲಿ ನಿಮ್ಮ ಕಚೇರಿಯ ಮುಂದೆ ದಿನನಿತ್ಯ ಹೋರಾಟ ಮಾಡಲು ಮುಂದಾಗಬೇಕಾಗುತ್ತದೆ ಎಚ್ಚರಿಸಿದ್ದಾರೆ..


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts