ಸಲಿಂಗಕಾಮಕ್ಕಾಗಿ ಬಾಲಕನ ಕಿಡ್ನಾಪ್ ಮಾಡಿದ್ದ ವ್ಯಕ್ತಿಗೆ 10 ವರ್ಷ ಜೈಲು

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಸಲಿಂಗಕಾಮಕ್ಕಾಗಿ ಕೊಪ್ಪಳದ ಗವಿಮಠ ಹಾಸ್ಟೇಲ್‌ನಿಂದ ಬಾಲಕನನ್ನು ಅಪಹರಿಸಿದ್ದ ಅಪರಾಧಿಗೆ 10 ವರ್ಷ ಜೈಲು ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

2018ರಲ್ಲಿ ಮೂವರು ವಿದ್ಯಾರ್ಥಿಗಳಿಗೆ ಮೊಬೈಲ್ ತೋರಿಸುವ ಆಮಿಷವೊಡ್ಡಿ ಗದಗ, ಕಲಬುರ್ಗಿ, ತಿರುಪತಿ, ರಾಯಚೂರು, ಬೆಂಗಳೂರು ಸೇರಿದಂತೆ ನಾನಾ ಊರುಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ತಿರುಗಾಡಿದ್ದ ಅಪರಾಧಿ ಶರಣಪ್ಪ ಕೆಂಬಾವಿ, ವಿದ್ಯಾರ್ಥಿಗಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡಿದ್ದ. ಬೆಂಗಳೂರಿನಲ್ಲಿ ಇದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ನೀಡಲಾಗಿತ್ತು.

ಇದುವರೆಗೂ ಪ್ರಕರಣದ ವಿಚಾರಣೆಯನ್ನು ಕೂಲಂಕಷವಾಗಿ ಆಲಿಸಿದ ಕೊಪ್ಪಳದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಎಸ್.ಎಂ.ಜಲವಾದಿಯವರು ಆರೋಪ ಸಾಬೀತಾಗಿದ್ದನ್ನು ತಿಳಿಸಿ ಪ್ರಕರಣದ ಆರೋಪಿಯನ್ನು ಅಪರಾಧಿ ಎಂದು ತೀರ್ಮಾನಿಸಿ 10 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here