ಸಹಕಾರ ಕ್ಷೇತ್ರಕ್ಕೆ ಸಿದ್ದನಗೌಡ ಪಾಟೀಲರ ಸೇವೆ ಸ್ಮರಣೀಯ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಏಷಿಯಾ ಖಂಡದಲ್ಲಿಯೇ ಮೊಟ್ಟಮೊದಲ ನೋಂದಾಯಿತ ಕಣಗಿನಹಾಳ ಕೃಷಿ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವುದರ ಮೂಲಕ ಸಹಕಾರ ಕ್ಷೇತ್ರಕ್ಕೆ ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲರ ಸೇವೆ ಸ್ಮರಣೀಯ ಎಂದು ಕೊಪ್ಪಳದ ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಡಿ.ಬಿ.ಗಡೇದ ತಿಳಿಸಿದ್ದಾರೆ.
ನಗರದ ಕೊಪ್ಪಳದ ಬಾಲಕಿಯರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಕೊಪ್ಪಳ ತಾಲೂಕು ಸರಕಾರಿ ಪದವಿಪೂರ್ವ ಕಾಲೇಜು ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಣಗಿನಹಾಳದಲ್ಲಿ ೨೦೦೫ರಲ್ಲಿ ಸಹಕಾರ ಸಂಘದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಸಿದ್ದನಗೌಡ ಪಾಟೀಲರ ಹೆಸರಿನಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು. ಇಂದು ಸಹಕಾರ ಕ್ಷೇತ್ರ ಎಲ್ಲ ರಂಗಗಳಲ್ಲಿ ಬೆಳೆದು ಬಂದಿರುವುದು ಸಂತಸದ ಸಂಗತಿ. ಕೊಪ್ಪಳದಲ್ಲಿಯೂ ಸಹಿತ ಕೊಪ್ಪಳ ತಾಲೂಕು ಸರಕಾರಿ ಪದವಿಪೂರ್ವ ಕಾಲೇಜು ನೌಕರರ ಪತ್ತಿನ ಸಹಕಾರ ಸಂಘ ಉತ್ತಮ ಕೆಲಸ ಮಾಡುತ್ತಿದೆ ಎಂದರು.
ಸಂಘದ ಅಧ್ಯಕ್ಷ ಎ.ವಿ. ಉಪಾಧ್ಯಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೊಪ್ಪಳ ಜಿಲ್ಲಾ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಸೋಮನಗೌಡ ಎಂ.ಪಾಟೀಲ, ತಾಲೂಕು ಅಧ್ಯಕ್ಷ ಪತ್ರೇಪ್ಪ ಛತ್ರಿಕಿ, ಭಾಗ್ಯನಗರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ರಾಜಶೇಖರ ಪಾಟೀಲ ಉಪಸ್ಥಿತರಿದ್ದರು.
ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐ.ಎಂ. ಚಿಕ್ಕರೆಡ್ಡಿ, ಎಂ.ಶಂಶುದ್ದೀನ್, ಮೊಯಿನುದ್ದೀನ್ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ವೆಂಕಟರಾವ್ ದೇಸಾಯಿ, ಆರ್.ಎಸ್.ಸರಗಣಚಾರ್ ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಉತ್ತಮ ಅಂಕ ಪಡೆದ ಅದಿತಿ ಬೋಸ್ಲೆ, ಪ್ರಮೋದ ಕಂಡ್ರಿ, ವೇದಾ ತೊಣಿಸಿಹಾಳ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜಶೇಖರ ಅಂಗಡಿ ಸ್ವಾಗತಿಸಿದರು. ಎಚ್.ಎಸ್.ಬಾರಕೇರ ನಿರೂಪಿಸಿದರು. ರಾಚಪ್ಪ ಜಿ.ಕೇಸರಬಾವಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here