ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಎಸ್ಪಿ ಯತೀಶ್ ಎನ್

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕೊರೋನಾ ವೈರಸ್ ತಡೆಗಟ್ಟಲು ಜಿಲ್ಲಾ ಎಸ್ಪಿ ಯತೀಶ್ ಎನ್ ಖುದ್ದು ಬೀದಿಗಿಳಿದು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ನಗರದ ಟಾಂಗಾ ಕೂಟ್ ಸರ್ಕಲ್ ನಲ್ಲಿ ಎಸ್ಪಿ ಯತೀಶ್ ಎನ್, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರಿಗೆ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರದ ಅವಶ್ಯಕತೆಯನ್ನು ವಿವರಿಸಿ ಹೇಳುವ ಮೂಲಕ ಕೊರೋನಾ ತಡೆಯ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ರೋಟರಿ ಸಂಸ್ಥೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸ್ಥಳದಲ್ಲಿಯೇ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸೋಪ್ ವಿತರಣೆ ಮಾಡಿ, ಇವುಗಳನ್ನು ಖಡ್ಡಾಯವಾಗಿ ಬಳಕೆ ಮಾಡವೇಕೆಂದು ಮನವಿ ಮಾಡಿದರು.

ಈ ವೇಳೆ ಡಿವೈಎಸ್ಪಿ S K ಪ್ರಹ್ಲಾದ್, ನಗರ ಠಾಣೆ ಸಿಪಿಐ ಪಿ ವಿ ಸಾಲಿಮಠ್, ಗ್ರಾಮೀಣ ಠಾಣೆ ಸಿಪಿಐ ರವಿಕುಮಾರ್ ಕಪ್ಪತ್ತನವರ, ಬೆಟಗೇರಿ ಸಿಪಿಐ ಬಿರಾದಾರ್, ಪಿಎಸ್ಐಗಳಾದ ಪ್ರಕಾಶ್ D, G T ಜಕ್ಕಲಿ ಕಮಲಮ್ಮ ದೊಡ್ಡಮನಿ, ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಗೌಡ ಧರ್ಮಾಯತ, ಕಾರ್ಯದರ್ಶಿ ಚಂದ್ರಮೌಳಿ ಜಾಲಿ, ಡಾ. ರಾಜಶೇಖರ್ ಬಳ್ಳಾರಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here