22.8 C
Gadag
Saturday, December 9, 2023

ಸಿಎಂ ಸ್ಥಾನ ಹೋದ ಮೇಲೆ ಸಿದ್ಧರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ

Spread the love

ವಿಜಯಸಾಕ್ಷಿ ಸುದ್ದಿ, ದಾವಣಗೆರೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಹುಚ್ಚನಂತಾಗಿದ್ದಾರೆ. ಹೀಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಸಿಎಂ ಆಗಲು ಕುರುಬರ ಎಸ್ ಟಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಆಗಿದ್ದವರು ಹೀಗೆ ನೀಚತನಕ್ಕೆ ಇಳಿದು ಮಾತನಾಡಬಾರದು. ನಾನು ಮುಖ್ಯಮಂತ್ರಿ ಆಗುವುದು ಬಿಜೆಪಿ ಪಕ್ಷ ನಿರ್ಧಾರ ಮಾಡುತ್ತದೆ. ನಮ್ಮ ಪಕ್ಷದಲ್ಲಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುವ ಸಿಸ್ಟಂ ಇಲ್ಲ.

ಧಮ್ ಇದ್ರೆ ಮುಂದಿನ ಸಿಎಂ ಈಶ್ವರಪ್ಪ ಎಂದು ಘೋಷಿಸಿಕೊಳ್ಳಲಿ ಎಂದಿದ್ದಾರೆ. ತಾವೇ ನಾನು ಮುಂದಿನ ಸಿಎಂ ಎಂದು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮೇಲೆ ಕಂಟ್ರೋಲ್ ಇಲ್ಲ. ಸಿದ್ದರಾಮಯ್ಯರನ್ನು ಯಾರು ಕಂಟ್ರೋಲ್ ಮಾಡುತ್ತಿಲ್ಲ. ಇದನ್ನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟ ಪಡಿಸಿ, ತಾಕತ್ತಿದ್ದರೆ ಸಿದ್ದರಾಮಯ್ಯಗೆ ನೋಟಿಸ್ ಕೊಡಲಿ ಎಂದು ಸವಾಲೆಸೆದರು.

ಪಾದಯಾತ್ರೆ ಮಾಡುತ್ತಿರುವುದು ಕನಕ ಗುರುಪೀಠದ ಸ್ವಾಮೀಜಿ. ನಾನಲ್ಲ. ಕನಿಷ್ಟ ಅರ್ಧ ಕಿಲೋಮೀಟರ್ ಆದ್ರೂ ಸಿದ್ದರಾಮಯ್ಯ ಪಾದಯಾತ್ರೆ ಮಾಡಲಿ ಎಂದು ಈಶ್ವರಪ್ಪ ಸಿದ್ದರಾಮಯ್ಯ ಅವರನ್ನು ಕುಟುಕಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts