ಸಿದ್ದರಾಮಯ್ಯಗೆ ಅನುಮಾನಿಸುವ ಕಾಯಿಲೆ ಇದೆ; ಹನುಮ ಹುಟ್ಟಿದ್ದು ಗೊತ್ತಾ ಹೇಳಿಕೆಗೆ ಸಿ.ಟಿ.ರವಿ ಟಾಂಗ್

0
Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

ತಾಯಿ ಇವರೇ ನಿಮ್ಮ ತಂದೆ ಎಂದರೆ ನಂಬುತ್ತಾರೆ, ಸಾಕ್ಷಿ ಕೇಳಲ್ಲ. ಕೆಲವರು ಸಾಕ್ಷಿ ಕೇಳುವ ಮನಸ್ಥಿತಿಯ ಜನರು ಇರುತ್ತಾರೆ. ಸಿದ್ದರಾಮಯ್ಯ ಸಾಕ್ಷಿ ಕೇಳುವ ಮನಸ್ಥಿತಿ ಇದ್ದರೆ ಅವರ ದೋಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದರು.

ಹನುಮ ಹುಟ್ಟಿದ್ದು ಗೊತ್ತಾ, ಸುಮ್ಮನೆ ತಿನ್ಲಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಕೆಲವರಿಗೆ ಎಲ್ಲವನ್ನೂ ಅನುಮಾನಿಸುವ ಪ್ರವೃತ್ತಿ ಇರುತ್ತೆ. ಸಿದ್ದರಾಮಯ್ಯ ಅವರಿಗೂ ಅಂತಹ ಕಾಯಿಲೆ ಇದ್ರೆ ಅದು ಅವರ ದೋಷ. ನಂಬಿಕೆ ಎಲ್ಲವನ್ನೂ ಮೀರಿದ್ದು.
ನಂಬಿಕೆಗಳ ಮೇಲೆ ಜಗತ್ತು ಇರುವುದು ಎಂದು ಅಭಿಪ್ರಾಯ ಪಟ್ಟರು.

ಕೆಲವರಿಗೆ ಭಗವಂತ ಕಾಣಲ್ಲ, ಕೆಲವರಿಗೆ ಎಲ್ಲ ಕಡೆ ಕಾಣುತ್ತಾನೆ.
ನೋಡುವ ದೃಷ್ಟಿ ಇರುವವರಿಗೆ ಭಗವಂತನನ್ನು ತೋರಿಸಬಹುದು.
ನೋಡುವ ದೃಷ್ಟಿ ಇಲ್ಲದವರಿಗೆ ಎಲ್ಲಿ ನಿಂತರೂ ಭಗವಂತ ಕಾಣುವುದಿಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು.

ಸಿದ್ದರಾಮಯ್ಯ ಅವರಿಗೆ ನಂಬಿಕೆ ಹುಟ್ಟಿನಿಂದ ಬಂದಿರುವುದಲ್ಲ, ಸಹವಾಸ ದೋಷದಿಂದ ಬಂದಿರುವದು. ಅವರ ತಂದೆ-ತಾಯಿಗೆ ದೇವರ ಮೇಲೆ ಶ್ರದ್ಧೆ ಇರುವ ಕಾರಣಕ್ಕೆ ದೇವರ ಹೆಸರಿಟ್ಟರು. ಸಹವಾಸ ದೋಷದಿಂದ ಅವರು ಕೆಟ್ಟಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.


Spread the love

LEAVE A REPLY

Please enter your comment!
Please enter your name here