ಸಿದ್ದರಾಮಯ್ಯ ಬಿಜೆಪಿಗೆ‌ ಬಂದ್ರೆ ಸ್ವಾಗತ: ಪಾಟೀಲ

0
Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಮಾಜಿ ಸಿಎಂ ಸಿದ್ದರಾಮಯ್ಯ ಮೊದಲು ತಮ್ಮದನ್ನು ತಾವು ನೋಡಿಕೊಳ್ಳಲಿ. ತಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ, ಮತ್ತೊಬ್ಬರ ತಾಟಿನ ನೊಣ ತೆಗೆಯೋದು ಬೇಡ. ಸಿದ್ದರಾಮಯ್ಯ ಬಿಜೆಪಿಗೆ ಬಂದ್ರೆ ಸ್ವಾಗತ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಕೊಪ್ಪಳದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
ಮೊದಲು ತಮ್ಮ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಮೊದಲು ಸರಿ ಮಾಡಿಕೊಳ್ಳಲಿ. ಡಿಕೆ ಶಿವಕುಮಾರ ಮತ್ತು ನಿಮ್ಮ ನಡುವಿನ ಕಚ್ಚಾಟ ಮುಗಿಸಿಕೊಳ್ಳಿ
ನಮ್ಮನ್ನು ಅನರ್ಹ ಮಾಡಲು ಮುಂದಾಗಿದ್ದ ನಿಮಗೆ ನಮ್ಮ ಬಗ್ಗೆ ಕಾಳಜಿ ಏಕೆ ಎಂದು ಬಿ.ಸಿ.ಪಾಟೀಲ ಪ್ರಶ್ನಿಸಿದರು.
ಬಿಜೆಪಿಯವರ ಬಗ್ಗೆ ಸಿದ್ದರಾಮಯ್ಯನವರಿಗೆ ಅಷ್ಟು ಚಿಂತೆ ಏಕೆ? ಸಿದ್ದರಾಮಯ್ಯನವರಿಗೆ ಬಿಜೆಪಿಗೆ ಬರಲು ಅಷ್ಟು ಆಸಕ್ತಿ ಇದ್ದರೆ ನಾವು ಸ್ವಾಗತಸ್ತಿವಿ ಎಂದರು.
ರಾಜ್ಯದಲ್ಲಿ ಇನ್ನೂ ಎರಡೂವರೆ ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ಇದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here