ಸಿದ್ರಾಮಯ್ಯರ ಆರೋಪದ ಹಿಂದೆ ಸಿಎಂ ಖುರ್ಚಿಯ ಕನಸಿದೆ: ಸಚಿವ ಶ್ರೀರಾಮುಲು ವ್ಯಂಗ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಸರಕಾರದ ವಿರುದ್ಧ ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪದ ಹಿಂದೆ ಸಿಎಂ ಖುರ್ಚಿಯ ಕನಸಿದೆ. ವಿರೋಧ ಪಕ್ಷದ ನಾಯಕ ಸ್ಥಾನದಿಂದ ಸಿಎಂ ಸ್ಥಾನಕ್ಕೆ ನೆಗೆಯಬೇಕೆಂದು ಹಾತೊರೆಯುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ವ್ಯಂಗ್ಯವಾಡಿದರು.

ನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಆರೋಪದಲ್ಲಿ ಹುರುಳಿಲ್ಲ. ರಾಜ್ಯ ಸರಕಾರ ಜನರ ಹಿತದೃಷ್ಟಿಗಾಗಿ ಕೆಲಸ‌ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಪಕ್ಷದಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಮಧ್ಯೆ ಪೈಪೋಟಿ ಇದೆ. ಅವರಲ್ಲೇ ಸರಿಯಾಗಿ ಹೊಂದಾಣಿಕೆ ಇಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಮೊದಲು ‘ಅಹಿಂದ’ ಅಂದ್ರು, ಈಗ ‘ಹಿಂದ’ ಎನ್ನುತ್ತಿದ್ದಾರೆ. ಮತ್ತೊಮ್ಮೆ ಅಹಿಂದ ವರ್ಗಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಸಿದ್ದರಾಮಯ್ಯ ಮುಂದಾಗುತ್ತಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನೆರೆ ಹಾವಳಿ, ಕೊರೊನಾ ಸೋಂಕು ಇದ್ದಿರಲಿಲ್ಲ. ಆದರೂ,
ಬರಗಾಲ, ಕೊರೊನಾ, ನೆರೆ ಹಾವಳಿಯಲ್ಲೂ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ.
ಸರಕಾರ ಡಕೋಟಾ ಎಕ್ಸ್‌ಪ್ರೆಸ್‌ ಅಲ್ಲ, ಎಲ್ಲ ಕಡೆಗೂ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ನಮ್ಮ ಸರಕಾರ ರಾಜ್ಯದ ಅಭಿವೃದ್ಧಿ ಪರವಾಗಿದೆ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

ಇಂದು ಬಾದಾಮಿಯಲ್ಲಿ 19.5 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ವಸತಿ ಶಾಲೆಗೆ ಸಿದ್ದರಾಮಯ್ಯ ಅವರೊಂದಿಗೆ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಅಲ್ಲದೇ, ಮಸ್ಕಿಯಲ್ಲೂ 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಸರಕಾರ ಬದ್ಧವಾಗಿದೆ ಎಂದು ಸಚಿವ ಶ್ರೀರಾಮುಲು ಅವರು ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here