22.8 C
Gadag
Saturday, December 9, 2023

ಸುಗ್ರಿವಾಜ್ಞೆ ಮೂಲಕ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ; ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು

ಸುಗ್ರಿವಾಜ್ಞೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದೆ.

ಸೋಮವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆಗೆ ಅನುಮೋದನೆ ಸಿಕ್ಕಿದೆ. ಈ ಕುರಿತು ಸುದೀರ್ಘ ಚರ್ಚೆ ನಡೆಸಿದೆ.

ವಿಧಾನಸಭೆಯಲ್ಲಿ ಗೋ ಹತ್ಯೆ ಕಾಯ್ದೆಗೆ ಅಂಗೀಕಾರ ಪಡೆದಿದ್ದ ರಾಜ್ಯ ಸರ್ಕಾರ, ವಿಧಾನ ಪರಿಷತ್ ನಲ್ಲಿ ಪಡೆಯಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಮುಂದಿನ ಅಧಿವೇಶನದವರೆಗೂ ಕಾಯದೇ ಸುಗ್ರಿವಾಜ್ಞೆ ಮೂಲಕ ಕಾಯ್ದೆ ಜಾರಿ ಮಾಡಿದೆ.

ವಿಧಾನಸಭೆಯಲ್ಲಿ ಕಾಯ್ದೆ ಅಂಗೀಕಾರಗೊಳ್ಳುತ್ತಿದ್ದಂತೆ ರಾಜ್ಯಾದ್ಯಂತ ಕೆಲ ಹಿಂದೂಪರ ಸಂಘಟನೆಗಳು ಸಂಭ್ರಮಿಸಿದ್ದವು. ಅಲ್ಲದೇ, ಸರ್ಕಾರಕ್ಕೆ ಅಭಿನಂದ‌ನೆಗಳ ಸುರಿಮಳೆ ಗೈದಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಗೋ ಹತ್ಯೆ ಕಾಯ್ದೆ ಜಾರಿಗೊಳಿಸಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts