ಸೋಂಕಿತನ ಶವ ಸಂಸ್ಕಾರಕ್ಕೆ ವಿರೋಧಿಸಿದ ಗ್ರಾಮಸ್ಥರು!

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಜಿಲ್ಲೆಯಲ್ಲಿ ಕೊರೊನಾ ಸೋಂಕಿತನ ಶವ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಅಮಾನವೀಯ ಘಟನೆ ಕಂಡು ಬಂದಿದೆ. ಜಿಲ್ಲೆಯ ರೋಣ ತಾಲೂಕಿನ ಅಮರಗೋಳದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವ್ಯಕ್ತಿಯೊಬ್ಬರು ಮಹಾಮಾರಿಗೆ ಬಲಿಯಾಗಿದ್ದರು. ಆದರೆ, ಈ ವ್ಯಕ್ತಿ ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು.

ಕೊರೊನಾದಿಂದಾಗಿ ಬಾಗಲಕೋಟೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದರು. ಆದರೆ, ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ಮಾತ್ರ ಹುಟ್ಟೂರಿಗೆ ಶವ ತಂದಿದ್ದರು.

ಈ ನಿರ್ಧಾರಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ನಂತರ ಜೆಸಿಬಿಯ ಮೂಲಕ ತಮ್ಮ ಸ್ವಂತ ಜಮೀನಿನಲ್ಲಿಯೇ ಸಂಬಂಧಿಕರು ಅಂತ್ಯ ಸಂಸ್ಕಾರ ಮಾಡಿದ್ದಾರೆ. ಹೆಚ್ಚು ಮಳೆ ಸುರಿದಿದ್ದರಿಂದಾಗಿ ಆಂಬುಲೆನ್ಸ್ ವಾಹನ ಹೊಲಕ್ಕೆ ತೆರಳಲು ಪರದಾಟ ನಡೆಸಿತು. ಕೊನೆಗೆ ಜೆಸಿಬಿಯಲ್ಲಿಯೇ ಶವ ಹಾಕಿಕೊಂಡು ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.


Spread the love

LEAVE A REPLY

Please enter your comment!
Please enter your name here